ಸ್ಥಳೀಯ

ಕಡಬ: ಶಶಿಕಲಾ ಕೆರೆಗೆ ಬಿದ್ದು ಮೃತ್ಯು!

GL
ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

chennai-shopping
maithri

ಆಲಂಕಾರಿನ ಪೆರಾಬೆ ಗ್ರಾಮದ ಬಲಂಪೋಡಿಯ ಉಮೇಶ್ ಎಂಬವರ ಪತ್ನಿ ಶಶಿಕಲಾ ಎಂಬವರು ಮೃತಪಟ್ಟ ಮಹಿಳೆ.

ಜುಲೈ 8 ರ ಮುಂಜಾನೆ ಪತಿ –ಪತ್ನಿ ಇಬ್ಬರೂ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡಿ ತೆರಳಿದ್ದು ಬಳಿಕ ಪತ್ನಿಯು ದನಗಳಿಗೆ ಹುಲ್ಲು ತರಲು ತಮ್ಮ ಕೃಷಿ ತೋಟದ ಕಡೆಗೆ ಹೋಗಿದ್ದರು.

ದನಗಳನ್ನು ಸ್ವಚ್ಚ ಮಾಡಿ ಮನೆಯಲ್ಲಿ ಇದ್ದು ಸುಮಾರು 1 ಗಂಟೆಯಾದರು ಪತ್ನಿ ಮನೆಗೆ ಬಾರದೇ ಇರುವುದರಿಂದ ತಮ್ಮ ತೋಟದ ಬಳಿ ಹೋಗಿ ನೋಡಿದಾಗ ಪತ್ನಿಯು ಕಾಣದೇ ಇದ್ದು ನೆರೆಕೆರೆಯವರ ಜೊತೆ ಸೇರಿ ಹುಡುಕಾಟ ಮಾಡಿದಾಗ ಕೆರೆಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಕೆರೆಯಿಂದ ಮೇಲಕ್ಕೆ ಎತ್ತಿದಾಗ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122