ಸ್ಥಳೀಯ

ಕಡಬ: ಶಶಿಕಲಾ ಕೆರೆಗೆ ಬಿದ್ದು ಮೃತ್ಯು!

tv clinic
ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

core technologies

ಆಲಂಕಾರಿನ ಪೆರಾಬೆ ಗ್ರಾಮದ ಬಲಂಪೋಡಿಯ ಉಮೇಶ್ ಎಂಬವರ ಪತ್ನಿ ಶಶಿಕಲಾ ಎಂಬವರು ಮೃತಪಟ್ಟ ಮಹಿಳೆ.

akshaya college

ಜುಲೈ 8 ರ ಮುಂಜಾನೆ ಪತಿ –ಪತ್ನಿ ಇಬ್ಬರೂ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡಿ ತೆರಳಿದ್ದು ಬಳಿಕ ಪತ್ನಿಯು ದನಗಳಿಗೆ ಹುಲ್ಲು ತರಲು ತಮ್ಮ ಕೃಷಿ ತೋಟದ ಕಡೆಗೆ ಹೋಗಿದ್ದರು.

ದನಗಳನ್ನು ಸ್ವಚ್ಚ ಮಾಡಿ ಮನೆಯಲ್ಲಿ ಇದ್ದು ಸುಮಾರು 1 ಗಂಟೆಯಾದರು ಪತ್ನಿ ಮನೆಗೆ ಬಾರದೇ ಇರುವುದರಿಂದ ತಮ್ಮ ತೋಟದ ಬಳಿ ಹೋಗಿ ನೋಡಿದಾಗ ಪತ್ನಿಯು ಕಾಣದೇ ಇದ್ದು ನೆರೆಕೆರೆಯವರ ಜೊತೆ ಸೇರಿ ಹುಡುಕಾಟ ಮಾಡಿದಾಗ ಕೆರೆಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಕೆರೆಯಿಂದ ಮೇಲಕ್ಕೆ ಎತ್ತಿದಾಗ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118