Gl
ಸ್ಥಳೀಯ

ಕಡಬ: ಶಶಿಕಲಾ ಕೆರೆಗೆ ಬಿದ್ದು ಮೃತ್ಯು!

ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಜಾನೆ ವೇಳೆ ಹುಲ್ಲು ತರಲೆಂದು ತೋಟಕ್ಕೆ ಹೋದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದಿಂದ ವರದಿಯಾಗಿದೆ.

rachana_rai
Pashupathi
akshaya college
Balakrishna-gowda

ಆಲಂಕಾರಿನ ಪೆರಾಬೆ ಗ್ರಾಮದ ಬಲಂಪೋಡಿಯ ಉಮೇಶ್ ಎಂಬವರ ಪತ್ನಿ ಶಶಿಕಲಾ ಎಂಬವರು ಮೃತಪಟ್ಟ ಮಹಿಳೆ.

pashupathi

ಜುಲೈ 8 ರ ಮುಂಜಾನೆ ಪತಿ –ಪತ್ನಿ ಇಬ್ಬರೂ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡಿ ತೆರಳಿದ್ದು ಬಳಿಕ ಪತ್ನಿಯು ದನಗಳಿಗೆ ಹುಲ್ಲು ತರಲು ತಮ್ಮ ಕೃಷಿ ತೋಟದ ಕಡೆಗೆ ಹೋಗಿದ್ದರು.

ದನಗಳನ್ನು ಸ್ವಚ್ಚ ಮಾಡಿ ಮನೆಯಲ್ಲಿ ಇದ್ದು ಸುಮಾರು 1 ಗಂಟೆಯಾದರು ಪತ್ನಿ ಮನೆಗೆ ಬಾರದೇ ಇರುವುದರಿಂದ ತಮ್ಮ ತೋಟದ ಬಳಿ ಹೋಗಿ ನೋಡಿದಾಗ ಪತ್ನಿಯು ಕಾಣದೇ ಇದ್ದು ನೆರೆಕೆರೆಯವರ ಜೊತೆ ಸೇರಿ ಹುಡುಕಾಟ ಮಾಡಿದಾಗ ಕೆರೆಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಕೆರೆಯಿಂದ ಮೇಲಕ್ಕೆ ಎತ್ತಿದಾಗ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101