ಕರಾವಳಿಸ್ಥಳೀಯ

ದರೋಡೆ ಮಾಡಿ, ಕಾರು ಕದ್ದರು!! ಮುಲ್ಕಿಯಲ್ಲಿ ಕಾರು ಬಿಟ್ಟು ಹೋದರು!

ಮುಲ್ಕಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಪತ್ತೆಯಾಗಿದ್ದು, ಅದು ಉರ್ವಸ್ಟೋರ್ ನ ಮನೆಯೊಂದರಿಂದ ಇಂದು ಮುಂಜಾವ ಕಳವಾಗಿರುವ ಕಾರೆಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಲ್ಕಿ: ಮುಲ್ಕಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಪತ್ತೆಯಾಗಿದ್ದು, ಅದು ಉರ್ವಸ್ಟೋರ್ ನ ಮನೆಯೊಂದರಿಂದ ಇಂದು ಮುಂಜಾವ ಕಳವಾಗಿರುವ ಕಾರೆಂದು ತಿಳಿದುಬಂದಿದೆ.

maithri

ನಗರದ ಉರ್ವಸ್ಟೋರ್ ಸಮೀಪದ ಕೋಟೆಕಣಿ ಒಂದನೇ ಕ್ರಾಸ್ ನಲ್ಲಿ ಮನೆಯೊಂದಕ್ಕೆ ಇಂದು ಮುಂಜಾವ ಕಳ್ಳರು ನುಗ್ಗಿದ್ದಾರೆ. ಈ ವೇಳೆ ಮನೆಮಂದಿಗೆ ಹಲ್ಲೆಗೈದು ಚಿನ್ನಾಭರಣ ದೋಚಿದ ಕಳ್ಳರು, ಬಳಿಕ ಅದೇ ಮನೆಯ ಕಾರನ್ನೂ ಕದಿದ್ದಾರೆ. ಅದೇ ಕಾರಿನಲ್ಲಿ ಮುಲ್ಕಿಯ ವರೆಗೆ ಬಂದ ಕಳ್ಳರು ಇಲ್ಲಿನ ಆಧಿದನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಅಪರಿಚಿತ ಕಾರೊಂದು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಪತ್ತೆಯಾಗಿರುವ ಕಾರಣ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 169