Gl harusha
ಕರಾವಳಿಸ್ಥಳೀಯ

ಕ್ರೇನ್ ಢಿಕ್ಕಿ: ಪಾದಚಾರಿ ಅಂಗಾರ angara ಮೃತ್ಯು!

ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

srk ladders
Pashupathi
Muliya

ಮೃತರನ್ನು ಅಂಗಾರ (75) angara ಎಂದು ಗುರುತಿಸಲಾಗಿದೆ.

ಅಂಗಾರ ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್ಕುಂದೂರು ಜಲದುರ್ಗದ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕಾರ್ಕಳ ಜೋಡುರಸ್ತೆಯಿಂದ ಅಯ್ಯಪ್ಪ ನಗರದ ಕಡೆಗೆ ಹೋಗುತ್ತಿದ್ದ ಕ್ರೇನ್ ಅಂಗಾರರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts