Gl
ಸ್ಥಳೀಯ

ರೋಟರಿ ಕ್ಲಬ್ rotary club ಪುತ್ತೂರು ಯುವದಿಂದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ

ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ kamala ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಗ್ರಾಮಸ್ಥರ ಸಹಕಾರದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಗ್ರಾಮಸ್ಥರ ಸಹಕಾರದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದರು.

rachana_rai
Pashupathi
akshaya college
Balakrishna-gowda

pashupathi

ಈ ಮಾನಸಿಕ ಅಸ್ವಸ್ಥ ಮಹಿಳೆಯು ಬಸ್ಸು ತಂಗುದಾಣದಲ್ಲಿ ವಾಸ್ತವ ಹೂಡಿರುವ ಕಾರಣ, ಹಾಗೂ ಕೆಲವೊಮ್ಮೆ ಈಕೆ ಮಾಡುವ ಹಾವಭಾವಗಳಿಂದ ಶಾಲೆಗೆ ಹೋಗುವ ಮಕ್ಕಳಿಗೆ ಈ ತಂಗುದಾಣದಲ್ಲಿ ನಿಲ್ಲಲು ಭಯವಾಗುತ್ತಿದ್ದು ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸಾರ್ವಜನಿಕರು ದೂರನ್ನು ನೀಡಿದ್ದರು.

ಈ ಮಹಿಳೆಯನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸುವಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಓ ಗೋಕುಲದಾಸ್ ಭಕ್ತ, ಗ್ರಾ. ಪ
ಉಪಾಧ್ಯಕ್ಷ ಪದ್ಮನಾಭ ಸಾಪಲ್ಯ, ಗ್ರಾ.ಪ ಸದಸ್ಯೆ ಭಾಗೀರಥಿ ಹಾಗೂ ಪುಷ್ಪಾವತಿ, ಪುರುಷೋತ್ತಮ, ಮಹಿಳಾ ಮತ್ತು ಮಕ್ಕಳ ಇಲಾಖೆಯ ವಿಟ್ಲ ಘಟಕದ ಮೇಲ್ವಿಚಾರಕಿ ಸೋಮಕ್ಕ, ಅಂಗನವಾಡಿ ಕಾರ್ಯಕರ್ತೆ ಕುಸುಮ, ಕೃಷಿಕರಾದ ಸುಬ್ರಾಯ ಭಟ್ ಕೊಂಕೋಡಿ, ಮಾನಸಿಕ ಅಸ್ವಸ್ಥತೆಯ ಅಕ್ಕನ ಮಗ ಸತೀಶ ಹಾಗೂ ಗ್ರಾಮಸ್ಥರು ಸಹಕರಿಸಿದರು.

ಮಹಿಳೆಯನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸುವಲ್ಲಿ ಪುತ್ತಿಲ ಪರಿವಾರದ ಆಂಬುಲೆನ್ಸ್ ಸೇವೆಯನ್ನು ಶ್ರೀ ಸುಜಿತ್ ಅವರು ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101