ಸ್ಥಳೀಯ

ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ | ಮೀನುಗಾರಿಕೆ‌ ಇಲಾಖೆಯ‌ ಮೂಲಕ‌ 50 ಮನೆ ನೀಡಲಾಗಿದೆ: ಅಶೋಕ್ ರೈ

ಮೀನುಗಾರಿಕಾ ಇಲಾಖೆಯ ಮೂಲಕ‌ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರ‌ಗಳು‌ ಮಂಜೂರು‌ ಮಾಡಿರಲಿಲ್ಲ. ಇದರಿಂದ ಬಡವರು ನೊಂದು ಹೋಗಿದ್ದರು. ಇಂದು‌10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ‌ ಪ್ರತೀಯೊಂದು ಇಲಾಖೆಯ‌ ಮೂಲಕ ಬಡವರಿಗೆ ನೆರವು ನೀಡುವ ಕಾರ್ಯವನ್ನು‌ ಮಾಡುತ್ತಿದೆ. ರಾಜ್ಯ ಸರಕಾರ ಬಡವರ ಪರ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಶಾಸಕ ಆಶೋಕ್ ಕುಮಾರ್ ರೈ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೀನುಗಾರಿಕಾ ಇಲಾಖೆಯ ಮೂಲಕ‌ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರ‌ಗಳು‌ ಮಂಜೂರು‌ ಮಾಡಿರಲಿಲ್ಲ. ಇದರಿಂದ ಬಡವರು ನೊಂದು ಹೋಗಿದ್ದರು. ಇಂದು‌10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ‌ ಪ್ರತೀಯೊಂದು ಇಲಾಖೆಯ‌ ಮೂಲಕ ಬಡವರಿಗೆ ನೆರವು ನೀಡುವ ಕಾರ್ಯವನ್ನು‌ ಮಾಡುತ್ತಿದೆ. ರಾಜ್ಯ ಸರಕಾರ ಬಡವರ ಪರ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಶಾಸಕ ಆಶೋಕ್ ಕುಮಾರ್ ರೈ ಹೇಳಿದರು.

akshaya college

ಪರಿಸರದಲ್ಲಿ ಎಲ್ಲವೂ ಇರಬೇಕು. ಪ್ರಾಣಿ, ಪಕ್ಷಿ ಮೀನು ಸಹಿತ‌ ಎಲ್ಲವೂ ನಮ್ಮ‌ನಡುವೆ ಬದುಕಬೇಕು.‌ ತಾಲೂಕಿನ ಪ್ರತೀ ಕೆರೆಗಳಲ್ಲಿ ಮೀನು ಸಾಕುವ ಕಾರ್ಯವನ್ನು ಮಾಡಬೇಕು ಎಂದು‌ ಶಾಸಕರು ಹೇಳಿದರು.

ತಾಪಂ ಸಹಾಯಕ ನಿರ್ದೇಶಕಿ‌ ಶೈಲಜಾ ಮಾತನಾಡಿ, ಶಿಬಿರದಲ್ಲಿ‌ ಭಾಗವಹಿಸಿ ಇದರ‌ ಪ್ರಯೋಜನವನ್ನು ಪಡೆದುಕೊಳ್ಳಬೇಕ. ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ‌ ಪ್ರತೀಯೊಬ್ಬರೂ ಮೌಲ್ಯ ವರ್ಧಿತ ಉತ್ಪನ್ನಗಳ ತಯಾರಿಕೆಯಲ್ಲಿ‌ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಗಜೇಂದ್ರ ಮೇಲೆ, ಮೀನುಗಾರಿಕ ಪ್ರಾಧ್ಯಾಪಕ ಪ್ರಭಾಕರ , ನಿವೃತ್ತ ಫ್ರೊಪೆಸರ್ ಡಾ.ಫಝಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೀನುಗಾರಿಕಾ ಇಲಾಖಾ ಸಹಾಯಕ ನಿರ್ದೇಶಕಿ ಮಂಜುಳಾ ಸಿ ಶೆಣೈ ಸ್ವಾಗತಿಸಿ, ವಂದಿಸಿದರು.‌ ತಾಪಂ‌ ಸಿಬಂದಿ‌‌ ನಮಿತಾ ಕಾರ್ಯಕ್ರಮ‌ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107