ಸ್ಥಳೀಯ

ಸುರಂಬೈಲು ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡನಾಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸುರಂಬೈಲು ಹಿ. ಪ್ರಾ ಶಾಲೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸುರಂಬೈಲು ಹಿ. ಪ್ರಾ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಟ್ಟಂಪಾಡಿ ವಲಯ ನಿಕಟ ಪೂರ್ವ ಅಧ್ಯಕ್ಷರು ಸದಾಶಿವ ರೈ ನೆರವೇರಿಸಿದರು.

ಅತಿಥಿಗಳಾಗಿ ಶಿವಕುಮಾರ್, ಶಾಲಾ ಶಿಕ್ಷಕ ನಾಗೇಶ್ ಪರಿಸರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾಅಭಿವೃದ್ಧಿ ಸಮಿತಿ ಅಧ್ಯಕ್ಷೆ ಸುನಿತಾ, ಶೌರ್ಯ ಕಾರ್ಯಕ್ರಮದ ಪ್ರತಿನಿಧಿ ಸುಬ್ರಮಣ್ಯ, ಕೃಷಿ ಮೇಲ್ವಿಚಾರಕರಾದ ಶಿವ ರಂಜನ್, ಮೇಲ್ವಿಚಾರಕರಾದ ಸೋಹಾನ್ ಭಾಗವಹಿಸಿದ್ದರು.

ಸೇವಾ ಪ್ರತಿನಿಧಿ ಪದ್ಮಾವತಿ ಸ್ವಾಗತಿಸಿ, ಜಯಶ್ರೀ ವಂದಿಸಿದರು. ಶೌರ್ಯದ ಸದಸ್ಯರು, ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 119