ಸ್ಥಳೀಯ

ಬಾವಿಗೆ ಬಿದ್ದ ಮರಿಯಾನೆ! | ಬಾವಿ ಕಲ್ಲು ಕೆಡವಿ ರಕ್ಷಿಸಿದ ತಾಯಾನೆ!

GL
ಬಾವಿಗೆ ಬಿದ್ದ ಮರಿಯಾನೆಯೊಂದನ್ನು ತಾಯಿ ಆನೆ ರಕ್ಷಿಸಿರುವ ಘಟನೆ ಎರ್ನಾಕುಲಂನ ಮಲಯತ್ತೂರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಾವಿಗೆ ಬಿದ್ದ ಮರಿಯಾನೆಯೊಂದನ್ನು ತಾಯಿ ಆನೆ ರಕ್ಷಿಸಿರುವ ಘಟನೆ ಎರ್ನಾಕುಲಂನ ಮಲಯತ್ತೂರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

chennai-shopping
maithri

ಬುಧವಾರ ಬೆಳಗ್ಗೆ ಇಲ್ಲಿತ್ತೋಟ್ ಒಂದನೇ ಬ್ಲಾಕ್‌ನಲ್ಲಿರುವ ಸಾಜು ಎಂಬವರ ನಿವಾಸದ ಬಾವಿಗೆ ಮರಿಯಾನೆ ಬಿದ್ದಿದೆ. ಆಗ ಆನೆಗಳ ಹಿಂಡು ಘೀಳಿಟ್ಟ ಸದ್ದನ್ನು ಕೇಳಿದ ಸ್ಥಳೀಯರಿಗೆ ಈ ಘಟನೆ ಗಮನಕ್ಕೆ ಬಂದಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ರವಾನಿಸಿದ್ದಾರೆ.

ಸುದ್ದಿ ತಿಳಿದು ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದರಾದರೂ, ಕಾಡಾನೆಗಳ ಹಿಂಡು ಬಾವಿಯ ಬಳಿಯೇ ಬೀಡು ಬಿಟ್ಟಿದ್ದುದರಿಂದ ಅವರು ರಕ್ಷಣಾ ಕಾರ್ಯಾಚರಣೆಗೆ ತೊಡಗಲು ಸಾಧ್ಯವಾಗಿಲ್ಲ. ಹೀಗಾಗಿ ಅರಣ್ಯ ಸಿಬ್ಬಂದಿಗಳು ಆನೆಗಳ ಹಿಂಡನ್ನು ಚದುರಿಸಲು ಮುಂದಾಗಿದ್ದಾರೆ.

ಈ ವೇಳೆ ತಾಯಿ ಆನೆಯು ಬಾವಿಯ ಕಲ್ಲುಗಳನ್ನು ಕೆಡವಿ, ಮರಿಯಾನೆಯು ಬಾವಿಯಿಂದ ಮೇಲೇರಲು ದಾರಿ ಮಾಡಿಕೊಟ್ಟಿದೆ. ಮರಿಯಾನೆಯು ಬಾವಿಯಿಂದ ಮೇಲೇರಿ ಬಂದ ನಂತರ, ಆನೆಯ ಹಿಂಡು ಕಾಡಿನತ್ತ ತೆರಳಿತು ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿ ನಿರಂತರವಾಗಿ ಮಾನವ-ವನ್ಯಜೀವಿ ಸಂಘರ್ಷದ ಪ್ರಕರಣಗಳ ವರದಿಯಾಗುತ್ತಲೇ ಇವೆ. ಅರಣ್ಯ ಸಿಬ್ಬಂದಿಗಳ ವಿರುದ್ಧ ಈ ಪ್ರದೇಶದ ನಿವಾಸಿಗಳು ರಸ್ತೆ ತಡೆ ನಡೆಸಿ, ಪ್ರತಿಭಟನೆಗಳನ್ನೂ ಮಾಡುತ್ತಿದ್ದಾರೆ.

ಜನವಸತಿ ಪ್ರದೇಶಗಳನ್ನು ಅತಿಕ್ರಮಿಸುತ್ತಿರುವ ವನ್ಯಜೀವಿಗಳ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ಈ ಪ್ರದೇಶದ ನಿವಾಸಿಗಳು ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122