Gl harusha
ರಾಜ್ಯ ವಾರ್ತೆಸ್ಥಳೀಯ

ತೋಟದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಜೊತೆಗಿದ್ದ ಯುವಕರಿಂದಲೇ ಕೃತ್ಯ

ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಯುವಕರಿಂದ ಅತ್ಯಾಚಾರ (sexual assult) ಮಾಡಿರುವಂತಹ ಘಟನೆ ಮಡಿಕೇರಿ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಯುವಕರಿಂದ ಅತ್ಯಾಚಾರ (sexual assult) ಮಾಡಿರುವಂತಹ ಘಟನೆ ಮಡಿಕೇರಿ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

srk ladders
Pashupathi

ಮತ್ತೋರ್ವ ಬಾಲಕಿ‌ ಮೇಲೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ‌ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜೂನ್ 9 ರಂದು ಮೂವರು ಸ್ನೇತರ ಜೊತೆ ರಸ್ತೆಯಲ್ಲಿ ಬಾಲಕಿಯರು ನಡೆದು ಸಾಗುತ್ತಿದ್ದರು. ಈ ವೇಳೆ ದಾರಿಯಲ್ಲಿ‌ ಬಂದ ಅಪರಿಚಿತ ಕಾರನ್ನು ಐವರು ಹತ್ತಿದ್ದಾರೆ. ನಾಗರಹೊಳೆಗೆ ಡ್ರಾಪ್‌ ನೀಡುವಂತೆ ಬಾಲಕಿಯರಿಂದ ವಿನಂತಿ ಮಾಡಲಾಗಿದೆ.

ಮಾರುತಿ 800 ಕಾರಿನಲ್ಲಿ ನಾಗರಹೊಳೆ‌ ಕಡೆ ಬಾಲಕಿಯರು ತೆರಳಿದ್ದು, ದಾರಿ‌ ಮಧ್ಯೆ ಕಾಫಿ ತೋಟದಲ್ಲಿ ಓರ್ವ ಬಾಲಕಿ ಮೇಲೆ ನವೀಂದ್ರ, ಅಕ್ಷಯ್ ಎಂಬುವವರಿಂದಲೇ ಅತ್ಯಾಚಾರ ಮಾಡಲಾಗಿದೆ. ಮತ್ತೋರ್ವ ಬಾಲಕಿ‌ ಮೇಲೆ ರಾಹುಲ್, ಮನು, ಸಂದೀಪ್ ಎಂಬುವವರಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ತಮ್ಮ‌ ಜೊತೆಯಲ್ಲಿ‌ ಬಂದಿದ್ದ ಯುವಕರಿಂದಲೇ ಅತ್ಯಾಚಾರಕ್ಕೆ ಯತ್ನಿಸಿರುವುದು ದುರಂತ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts