Gl
ಸ್ಥಳೀಯ

ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಮುಂದಿನ ವರ್ಷದಿಂದಲೆ ಹೊಸ ನಿಯಮ ಜಾರಿ!

ಮುಂದಿನ ವರ್ಷದಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಥವಾ ಐಸಿಎಸ್ಇ (ICSE) ಅಡಿಯಲ್ಲಿ ಪ್ರಾರಂಭವಾಗುವ ಎಲ್ಲಾ ಶಾಲೆಗಳಿಗೆ ಕನ್ನಡ ಕಲಿಕೆಯ ಕಡ್ಡಾಯ ಹೊಸ ನಿಯಮ ಅನ್ವಯವಾಗಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಮುಂದಿನ ವರ್ಷದಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಥವಾ ಐಸಿಎಸ್ಇ (ICSE) ಅಡಿಯಲ್ಲಿ ಪ್ರಾರಂಭವಾಗುವ ಎಲ್ಲಾ ಶಾಲೆಗಳಿಗೆ ಕನ್ನಡ ಕಲಿಕೆಯ ಕಡ್ಡಾಯ ಹೊಸ ನಿಯಮ ಅನ್ವಯವಾಗಲಿದೆ.

rachana_rai
Pashupathi
akshaya college
Balakrishna-gowda

ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಶಾಲೆಗಳ ಸ್ಥಾಪನೆಗೆ ಅನುಮೋದನೆ ಕೋರಿರುವ ಎಲ್ಲಾ ಅರ್ಜಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅನುಮೋದನೆ ನೀಡಿದ್ದು, ಈ ಶಾಲೆಗಳಲ್ಲಿಯೂ ಸಹ ಹೊಸ ನಿಯಮ ಜಾರಿಯಾಗಲಿದೆ.

pashupathi

ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ಐಸಿಎಸ್ಇ ಮಂಡಳಿ, ಇದರ ಜತೆಯಲ್ಲಿ ಪ್ರತಿಯೊಂದು ಶಾಲೆಯು ಮುಂಬರುವ ವರ್ಷದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (ಎನ್ಒಸಿ) ಪಡೆಯಬೇಕು ಎಂಬ ನಿಯಮವನ್ನು ಜಾರಿಗೊಳಿಸಿದೆ.

ಶಿಕ್ಷಣ ಇಲಾಖೆಯಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ 164 ಹೊಸ ಶಾಲೆಗಳನ್ನು ಸ್ಥಾಪಿಸಲು ಅನುಮೋದನೆ ದೊರೆತಿದೆ. ಅದರಲ್ಲಿ ಸುಮಾರು 50 ಶಾಲೆಗಳು ಬೇರೆ ಮಂಡಳಿಗಳಿಗೆ ಸೇರಿದ್ದಾಗಿವೆ. ಇವುಗಳಿಗೆ ಅನುಮೋದನೆ ನೀಡಿದ್ದು, ಇವು ಮುಂದಿನ ವರ್ಷದಿಂದ ಆರಂಭವಾಗಲಿವೆ. ಈ ಹಿಂದೆ ಅಂದರೆ 2015ರಲ್ಲಿ ಶಾಲೆಗಳಲ್ಲಿ ಕನ್ನಡ ಕಡ್ಡಾಯವಾಗಿ ಕಲಿಸುವ ಕಾನೂನನ್ನು ಪೋಷಕರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಹಾಗೆಯೇ ಎನ್ಒಸಿ ನೀಡುವುದಕ್ಕೆ ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕಾಗಿತ್ತು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಅಂಶವೂ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

2023ರಲ್ಲಿ ಸುಮಾರು 25ಕ್ಕೂ ಹೆಚ್ಚು ಪೋಷಕರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದು, ಕಾನೂನು ಪಾಲನೆಯಿಂದ ತಮ್ಮ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಮನವಿ ಮಾಡಿದ್ದರು. ಹೀಗಾಗಿ ರಾಜ್ಯ ಸರ್ಕಾರ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದಕ್ಕೆ ಎನ್ಒಸಿ ನೀಡುವ ಸಂದರ್ಭದಲ್ಲಿ ಸರ್ಕಾರ ಮಾನದಂಡವನ್ನಾಗಿ ಮಾಡಿದೆ. ಈ ಸಂಬಂಧ ನಿಯಮಗಳಿಗೆ ಸೂಕ್ತ ರೀತಿಯಲ್ಲಿ ತಿದ್ದುಪಡಿ ತರಲಾಗಿದ್ದು, ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಎನ್ಒಸಿ ಕಡ್ಡಾಯ
ಹೊಸ ನಿಯಮದ ಪ್ರಕಾರ ಶಾಲಾ ಆಡಳಿತ ಮಂಡಳಿಯು ಹೊಸ ಶಾಲೆಯನ್ನು ಸ್ಥಾಪಿಸುವಾಗ ಎನ್ಒಸಿ ಕಡ್ಡಾಯವಾಗಿ ಪಡೆಯಲೇ ಬೇಕು ಎಂದು ನಿಯಮಗಳನ್ನು ಮಾರ್ಪಾಡು ಮಾಡಲಾಗಿತ್ತು. ಮುಂದಿನ ವರ್ಷದಿಂದ ಶಾಲೆಗಳ ಆಡಳಿತ ಮಂಡಳಿಯು ಎನ್ಒಸಿ ಅರ್ಜಿ ನಮೂನೆಯಲ್ಲಿ ಕನ್ನಡ ಶಿಕ್ಷಣಕ್ಕೆ ಆದ್ಯತೆ ನೀಡುತ್ತೇವೆ ಎನ್ನುವುದನ್ನು ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಬೇಕು. ಇಲ್ಲದಿದ್ದರೆ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಿತ್ತು. ಒಂದು ವೇಳೆ ಅರ್ಜಿಯಲ್ಲಿ ಶಾಲೆಯು ಕನ್ನಡವನ್ನು ಕಲಿಸುವ ಉದ್ದೇಶದ ಬಗ್ಗೆ ಸುಳ್ಳು ಹೇಳಿಕೆಗಳನ್ನು ನಮೂದಿಸಿದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಿತ್ತು.

ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಯಲ್ಲಿ ನೋಂದಣಿಯಾಗಿರುವ ಶಾಲೆಗಳಿಗೆ ಹೊಸ ನಿಯಮದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಹೇಳಿಕೆ ನೀಡಿದೆ. ಆದರೆ ಇತರ ಮಂಡಳಿಗಳೊಂದಿಗೆ ನೋಂದಣಿಯಾಗಿರುವ ಶಾಲೆಗಳಿಗೆ ಇದು ಒಂದು ಸವಾಲಾಗಿದೆ. ಈ ಮಂಡಳಿಯ ಅಧಿಕಾರಿಗಳು ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿ ಮಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101