tamanvi
ಸ್ಥಳೀಯ

ಚೈತನ್ಯ ಪಬ್ಲಿಕ್ ಸ್ಕೂಲಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ child marriage and pocso actಕಾರ್ಯಾಗಾರ

ಕೃಷ್ಣಾಪುರ ಚೈತನ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ child marriage and pocso act  ಕಾರ್ಯಾಗಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೃಷ್ಣಾಪುರ ಚೈತನ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ child marriage and pocso act  ಕಾರ್ಯಾಗಾರ ನಡೆಯಿತು.

ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಭಿಕ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ, ಖಾಯಂ ಲೋಕ್ ಅದಾಲತ್ ಇದರ ಅಧ್ಯಕ್ಷ ಅಭಯ್ ಧನಪಾಲ್ ಚೌಗುಲೆ ಮಾತನಾಡಿ, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ ಅಂದರೆ ಪೋಕ್ಸೋ ಕಾಯ್ದೆ. ಮಕ್ಕಳ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಅವಕಾಶ ನೀಡಬಾರದು. ಅಂತಹ ಸಾಮಾಜಿಕ ಸ್ವಾಸ್ಥ್ಯ್ ಕೆಡಿಸುವ ಪಿಡುಗುಗಳನ್ನು ನಿರ್ಮೂಲನೆ ಮಾಡುವಲ್ಲಿ ಪ್ರತಿಯೋರ್ವರು ಕೈಜೋಡಿಸಬೇಕು. ಅಲ್ಲದೇ, ಬಾಲ್ಯ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಬಾಲ್ಯ ವಿವಾಹದಂತಹ ಘಟನೆಗಳು ಗಮನಕ್ಕೆ ಬಂದರೆ, ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಈ ಮೂಲಕ ಎಲ್ಲರೂ ಜೊತೆಯಾಗಿ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಕೆಲಸ ಮಾಡಬೇಕಿದೆ ಎಂದರು.

ವಕೀಲ ಓಮರ್ ಫಾರೂಕ್ ಮುಲ್ಕಿ ಮುಖ್ಯ ಅತಿಥಿಯಾಗಿದ್ದರು. ಶಾಲಾ ಅಧ್ಯಕ್ಷ ಕೆ.ಎ. ಖಾದರ್,  ಸಂಚಾಲಕ ಎಂ.ಎ. ಹನೀಫ್, ಕಾರ್ಯದರ್ಶಿ ಶೇಕ್ ಅಹ್ಮದ್, ಶಾಲಾ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135