Gl harusha
ಸ್ಥಳೀಯ

ಮಂಗಳೂರು ಎಕ್ಸ್‌ಪ್ರೆಸ್, ಮತ್ಸ್ಯ ಗಂಧ ರೈಲು ಸಂಚಾರ ಬಂದ್!

ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಮಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಮಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.

srk ladders
Pashupathi
Muliya

ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿತ್ತು. ಇದೀಗ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಮಣ್ಣು ಕುಸಿತವಾಗಿದೆ.

ಮಂಗಳೂರು ಎಕ್ಸ್‌ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ತುಟಾರಿ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ಕ್ಯಾನ್ಸಲ್ ಆಗಿದೆ.

ಬೋಗ್ದ್ಯಾದಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲೇ ರಾತ್ರಿ ಕಳೆಯುವಂತಾಗಿತ್ತು. ನೂರಾರು ಪ್ರಯಾಣಿಕರು ಕೊಂಕಣ ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾರೆ. ಮುಂದಿನ ನಾಲ್ಕು ದಿನ ಕೊಂಕಣ ಸೇರಿದಂತೆ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಸತಾರಾ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಪುಣೆ, ನಾಗ್ಪುರ, ರಾಯಗಢ, ಗಡ್ಚಿರೋಲಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕೊಂಕಣ, ಮಧ್ಯ ಮಹಾರಾಷ್ಟ್ರ ಘಟಮತ್ಯವಾರದಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ವಿದರ್ಭದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರಿಂದಾಗಿ ಘಾಟ್ ಪ್ರವಾಸೋದ್ಯಮಕ್ಕೆ ಭೇಟಿ ನೀಡುವಾಗ ಜಾಗರೂಕರಾಗಿರಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.

ಮಳೆಗೆ ಮುಂಬೈ-ಪುಣೆ ಹೆದ್ದಾರಿ ಭಾರೀ ಮಳೆಗೆ ಮುಳುಗಿ ಹೋಗಿದೆ. ಈ ಹೆದ್ದಾರಿಯಲ್ಲಿ ಕಾರು-ಬೈಕ್ಗಳು ಥೇಟ್ ಬೋಟ್ಗಳಂತೆ ನಿಂತ ನೀರಿನಲ್ಲೇ ಓಡಾಡ್ತಿವೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ರು ಪ್ರವಾಹಕ್ಕೆ ಸಿಲುಕಿಕೊಂಡಿದ್ರು. ರಕ್ಷಣಾ ಸಿಬ್ಬಂದಿ ಆತನನ್ನ ಬಚಾವ್ ಮಾಡುವಲ್ಲಿ ಯಶಸ್ವಿಯಾದ್ರು. ಅದೇ ರೀತಿ, ಖೇಡ್ ಪ್ರದೇಶದಲ್ಲಿ ಕೂಡ ಓರ್ವ ಮಹಿಳೆಯ ರಕ್ಷಣೆ ಮಾಡಲಾಯ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ