Gl
ಕರಾವಳಿಸ್ಥಳೀಯ

ದೈಗೋಳಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ ಟ್ರಸ್ಟಿ ಡಾ. ಉದಯ ಕುಮಾರ್ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ ಟ್ರಸ್ಟಿ ಡಾ. ಉದಯ ಕುಮಾರ್ ತಿಳಿಸಿದರು.

Pashupathi

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಉದ್ಘಾಟಿಸಿ ಆಶ್ರಮವನ್ನು ಆರಂಭಿಸಿದ ಉದ್ದೇಶ ಮತ್ತು ಸೇವಾ ಚಟುವಟಿಕೆಗಳ ಮಾಹಿತಿಯನ್ನು ಅವರು ನೀಡಿದರು.

akshaya college

ಡಾ. ಶಾರದಾ ಯು.ಕುಮಾರ್ ಸೇವಾಶ್ರಮದ ವಿವಿಧ ವಿಭಾಗಗಳ ಪರಿಚಯವನ್ನು ಪ್ರತಿಷ್ಠಾನದ ಸದಸ್ಯರಿಗೆ ಮಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ, ಪರೋಪಕಾರ ಮತ್ತು ಸೇವೆಯ ನಿಜಾರ್ಥವನ್ನು ತಿಳಿದು ಸೇವಾಶ್ರಮಕ್ಕೆ ಸರ್ವ ರೀತಿಯ ನೆರವನ್ನು ನೀಡಬೇಕಾಗಿರುವುದು ನಮ್ಮ ಕರ್ತವ್ಯವೆಂದು ತಿಳಿಸಿ ಪ್ರತಿಷ್ಠಾನದ ಮುಂದಿನ ಕಾರ್ಯ ಯೋಜನೆಗಳ ಮಾಹಿತಿ ನೀಡಿದರು.

ಪ್ರೊ.ವೇದವ್ಯಾಸ ರಾಮಕುಂಜ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಉದಯ ಶಂಕರ ರೈ ಪುಣಚ ಡಾ. ಉದಯ ಕುಮಾರರನ್ನು ಗೌರವಿಸಿದರು.

ಡಾ.ಬಿ.ಎನ್ ಮಹಾಲಿಂಗ ಭಟ್, ಬಾಲಕೃಷ್ಣ ನಾಯಕ್ ಕೋಕಳ ,ರವಿ ಶ್ರೀನಿವಾಸ, ಪಿ ರಾಮಚಂದ್ರ ಭಟ್, ಸೀತಾರಾಮ ಪೆರ್ನಾಜೆ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಸದಸ್ಯರಾದ ಅನಾರು ಕೃಷ್ಣ ಶರ್ಮ ಸ್ವಾಗತಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿ, ಭವಾನಿ ಶಂಕರ ಶೆಟ್ಟಿ ಪುತ್ತೂರು ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113