tamanvi
ಕರಾವಳಿಸ್ಥಳೀಯ

ದೈಗೋಳಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

D_shiva_bhat
ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ ಟ್ರಸ್ಟಿ ಡಾ. ಉದಯ ಕುಮಾರ್ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ ಟ್ರಸ್ಟಿ ಡಾ. ಉದಯ ಕುಮಾರ್ ತಿಳಿಸಿದರು.

maithri

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಉದ್ಘಾಟಿಸಿ ಆಶ್ರಮವನ್ನು ಆರಂಭಿಸಿದ ಉದ್ದೇಶ ಮತ್ತು ಸೇವಾ ಚಟುವಟಿಕೆಗಳ ಮಾಹಿತಿಯನ್ನು ಅವರು ನೀಡಿದರು.

ಡಾ. ಶಾರದಾ ಯು.ಕುಮಾರ್ ಸೇವಾಶ್ರಮದ ವಿವಿಧ ವಿಭಾಗಗಳ ಪರಿಚಯವನ್ನು ಪ್ರತಿಷ್ಠಾನದ ಸದಸ್ಯರಿಗೆ ಮಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ, ಪರೋಪಕಾರ ಮತ್ತು ಸೇವೆಯ ನಿಜಾರ್ಥವನ್ನು ತಿಳಿದು ಸೇವಾಶ್ರಮಕ್ಕೆ ಸರ್ವ ರೀತಿಯ ನೆರವನ್ನು ನೀಡಬೇಕಾಗಿರುವುದು ನಮ್ಮ ಕರ್ತವ್ಯವೆಂದು ತಿಳಿಸಿ ಪ್ರತಿಷ್ಠಾನದ ಮುಂದಿನ ಕಾರ್ಯ ಯೋಜನೆಗಳ ಮಾಹಿತಿ ನೀಡಿದರು.

ಪ್ರೊ.ವೇದವ್ಯಾಸ ರಾಮಕುಂಜ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಉದಯ ಶಂಕರ ರೈ ಪುಣಚ ಡಾ. ಉದಯ ಕುಮಾರರನ್ನು ಗೌರವಿಸಿದರು.

ಡಾ.ಬಿ.ಎನ್ ಮಹಾಲಿಂಗ ಭಟ್, ಬಾಲಕೃಷ್ಣ ನಾಯಕ್ ಕೋಕಳ ,ರವಿ ಶ್ರೀನಿವಾಸ, ಪಿ ರಾಮಚಂದ್ರ ಭಟ್, ಸೀತಾರಾಮ ಪೆರ್ನಾಜೆ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಸದಸ್ಯರಾದ ಅನಾರು ಕೃಷ್ಣ ಶರ್ಮ ಸ್ವಾಗತಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿ, ಭವಾನಿ ಶಂಕರ ಶೆಟ್ಟಿ ಪುತ್ತೂರು ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 173