tamanvi
ರಾಜ್ಯ ವಾರ್ತೆಸ್ಥಳೀಯ

ನದಿಯಲ್ಲಿ 30 ಟನ್‌ ಗ್ಯಾಸ್‌ ಟ್ಯಾಂಕರ್! ಅನಿಲ ಬಿಡುಗಡೆಯಿಂದ ಆತಂಕ: ಸ್ಥಳೀಯರ ಸ್ಥಳಾಂತರ!! MRPL ಸಹಿತ ನೌಕಾದಳದಿಂದ ಕಾರ್ಯಾಚರಣೆ

D_shiva_bhat
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್‌ ಟ್ಯಾಂಕರ್‌ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್‌ ಟ್ಯಾಂಕರ್‌ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.
ಎರಡು ದಿನಗಳಿಂದ ಶಿರೂರಿಗೆ 7 ಕಿ.ಮೀ. ದೂರದ ಸಗಡಗೇರಿ ಗ್ರಾಮದ ಬಳಿ ನದಿಯಲ್ಲಿ ತೇಲುತ್ತಾ ಲಂಗರು ಹಾಕಿದ್ದ ಟ್ಯಾಂಕರನ್ನು ನದಿಯಲ್ಲೇ ಅನಿಲ ಖಾಲಿ ಮಾಡಿ ಹೊರಗೆಳೆದು ತರಲಾಗುತ್ತಿದೆ.

maithri

ಮಂಗಳೂರಿನ ಎಂಆರ್‌ಪಿಎಲ್‌, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ನೌಕಾದಳ ಹಾಗೂ ಇತರ ಪರಿಣತರ ತಂಡ ಗುರುವಾರ ಬೆಳಗ್ಗೆಯೇ ಬೋಟ್‌ ಮೂಲಕ ತೆರಳಿ ಟ್ಯಾಂಕರ್‌ಗೆ ಹಗ್ಗದಿಂದ ಕಟ್ಟಿ ನಾಲ್ಕು ಕ್ರೇನ್‌ಗಳನ್ನು ಬಳಸಿ ಅರ್ಧತಾಸಿನಲ್ಲೇ ದಡದಂಚಿಗೆ ಎಳೆದು ತಂದಿತು.

ಅಪರಾಹ್ನ 2 ಗಂಟೆ ಹೊತ್ತಿಗೆ ಟ್ಯಾಂಕರ್‌ನಿಂದ ಅನಿಲವನ್ನು ನದಿ ನೀರಿಗೆ ಬಿಡುವ ಕಾರ್ಯ ಆರಂಭಗೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 159