ರಾಜ್ಯ ವಾರ್ತೆಸ್ಥಳೀಯ

Ankola ದುರಂತ: ಮಹಿಳೆಯ ಮೃತದೇಹ ಪತ್ತೆಯಾದ ನದಿಯಲ್ಲಿ ಅರ್ಜುನನಿಗಾಗಿ ಶೋಧ! ಶೋಧ ಕಾರ್ಯ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಮಾಧ್ಯಮಗಳ

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವಳಿ ನದಿ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಕಣ್ಮರೆಯಾಗಿರುವ ಅರ್ಜುನನಿಗೆ ಶೋಧ ಕಾರ್ಯ ಮುಂದುವರಿದಿದೆ.

maithri

ಅಂಕೋಲಾದಲ್ಲಿ ನಡೆದಿರುವ ಭೀಕರ ಗುಡ್ಡ ಕುಸಿತದ ಬಳಿಕ ಮಣ್ಣು ತೆರವಿನ ಕಾರ್ಯ, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ನಡುವೆ ಮಂಗಳವಾರ ನಸುಕಿನ ಜಾವ ಮಹಿಳೆಯೊಬ್ಬರ ಶವ ಗಂಗೆಕೊಳ್ಳದಲ್ಲಿ ಪತ್ತೆಯಾಗಿದೆ.

ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಅವರ ಮೃತದೇಹ ಇದೆಂದು ಪೊಲೀಸರು ಶಂಕಿಸಿದ್ದಾರೆ.

ಮಹಿಳೆ ಧರಿಸಿದ್ದ ಬಳೆಯ ಆಧಾರದಲ್ಲಿ ಗುರುತು ಪತ್ತೆ ಹಚ್ಚಲಾಗಿದೆ. ಈ ಮೂಲಕ ದುರಂತದಲ್ಲಿ ಸಾವೀಗೀಡಾದವರ ಸಂಖ್ಯೆ 8ಕ್ಕೆ ಏರಿದಂತಾಗಿದೆ.

ಈ ನಡುವೆ ಟ್ರಕ್ ಚಾಲಕ ಅರ್ಜುನನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆತ ಚಲಾಯಿಸಿಕೊಂಡು ಬಂದಿದ್ದ ಟ್ರಕ್ ಕೂಡ ಕಣ್ಮರೆಯಾಗಿದೆ.

ಒಂದೆಡೆ ಕುಸಿತಗೊಂಡ ಮಣ್ಣಿನ ತೆರವು ಕಾರ್ಯ ನಡೆಯುತ್ತಿದ್ದರೆ, ಇನ್ನೊಂದೆಡೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ಅರ್ಜುನ ಹಾಗೂ ಆತ ಚಲಾಯಿಸಿಕೊಂಡು ಬಂದಿದ್ದ ಟ್ರಕ್ ಕಣ್ಮರೆಯಾಗಿದ್ದು, ಇದನ್ನು ಪತ್ತೆಹಚ್ಚಲು ಕರ್ನಾಟಕ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇರಳದ ಮಾಧ್ಯಮಗಳು ಆಕ್ರೋಶ ವ್ಯಕ್ತಪಡಿಸಿವೆ.

ಕೇರಳ ಹಲವಾರು ಪ್ರವಾಹ, ಅನಾಹುತಗಳನ್ನು ನೋಡಿವೆ. ಅವೆಲ್ಲವನ್ನು ಎದುರಿಸಿ ಜಯಿಸಿ ಬಂದಿದೆ. ಹಾಗಾಗಿ ಅಂಕೋಲ ದುರಂತದಲ್ಲಿ ಕಣ್ಮರೆಯಾದವರನ್ನು ಪತ್ತೆ ಹಚ್ಚಲು ಕರ್ನಾಟಕ ಸರಕಾರಕ್ಕೆ ಸಾಧ‍್ಯವಾಗದೇ ಹೋದರೆ, ನಮಗೆ ತಿಳಿಸಿ ಎಂದು ಸವಾಲೆಸೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 157