tamanvi
ಸ್ಥಳೀಯ

ವಿಶೇಷ ಚೇತನರ ವಾಹನ – ಟ್ಯಾಂಕರ್ ಡಿಕ್ಕಿ: ವಿಶೇಷ ಚೇತನ ಶಿವರಾಮ ನಾಯ್ಕ ದಾರುಣ ಮೃತ್ಯು!

D_shiva_bhat
ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಟ್ಯಾಂಕರ್ ಮತ್ತು ತ್ರಿವೀಲರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ವಿಶೇಷ ಚೇತನರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಜು. 23ರಂದು ರಾತ್ರಿ ಸಂಭವಿಸಿದೆ.

ಮೃತಪಟ್ಟವರನ್ನು ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50 ) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲರ್ ಸ್ಕೂಟರ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 129