ರಾಜ್ಯ ವಾರ್ತೆಸ್ಥಳೀಯ

ಶಿರೂರು: ಗಂಗಾವಳಿ ನದಿಯಲ್ಲಿ ಟ್ರಕ್ಕೊಂದು ಮುಳುಗಿರುವುದು ಖಚಿತ!

ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್‌ ನಿವಾಸಿ ಅರ್ಜುನ್‌ ಅವರಿಗಾಗಿ ಶೋಧ ಮುಂದುವರಿದಿರುವ ನಡುವೆ ಟ್ರಕ್‌ ಒಂದು ಗಂಗಾವಳಿ ನದಿಯಲ್ಲಿ ಮುಳುಗಿರುವುದು ಖಚಿತವಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್‌ ನಿವಾಸಿ ಅರ್ಜುನ್‌ ಅವರಿಗಾಗಿ ಶೋಧ ಮುಂದುವರಿದಿರುವ ನಡುವೆ ಟ್ರಕ್‌ ಒಂದು ಗಂಗಾವಳಿ ನದಿಯಲ್ಲಿ ಮುಳುಗಿರುವುದು ಖಚಿತವಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ.

maithri

“ಒಂದು ಟ್ರಕ್‌ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ ಹಾಗೂ ನೌಕಾಪಡೆಯ ಮುಳುಗು ತಜ್ಞರು ಅದನ್ನು ಮೇಲಕ್ಕೆ ತರಲಿದ್ದಾರೆ. ಲಾಂಗ್‌ ಆರ್ಮ್‌ ಬೂಮರ್‌ ಎಕ್ಸ್‌ಕವೇಟರ್‌ ಬಳಸಿ ನದಿ ನೀರಿನಲ್ಲಿ ಡ್ರೆಜ್ಜಿಂಗ್‌ ನಡೆಸಲಿದೆ. ಶೋಧಕ್ಕಾಗಿ ಡ್ರೋನ್‌ ಆಧರಿತ ಇಂಟಲಿಜೆಂಟ್‌ ಅಂಡರ್‌ಗ್ರೌಂಡ್‌ ಬರೀಡ್‌ ಆಬ್ಜೆಕ್ಟ್‌ ಡಿಟೆಕ್ಷನ್‌ ಸಿಸ್ಟಂ ಅನ್ನೂ ಬಳಸಲಾಗಿದೆ. ನಾಪತ್ತೆಯಾದವರ ಮೃತದೇಹಗಳಿಗಾಗಿ ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಮೂಲಕವೂ ಶೋಧ ನಡೆಸಲಾಗುವುದು,” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದು ಎಕ್ಸ್‌ನಲ್ಲಿ ಪೋಸ್ಟ್‌ ಒಂದರ ಮೂಲಕ ಮಾಹಿಈಗ ಬಳಸಲಾಗುತ್ತಿರುವ ಎಕ್ಸ್‌ಕವೇಟರ್‌ 60 ಮೀಟರ್‌ ಆಳದ ತನಕ ಮಣ್ಣನ್ನು ಅಗೆಯಬಹುದಾಗಿದೆ. ಅರ್ಜುನ್‌ ಹಾಗೂ ಇತರ ಇಬ್ಬರು ನಾಪತ್ತೆಯಾದವರಿಗಾಗಿ ಹುಡುಕಲು ಆಧುನಿಕ ರೇಡಿಯೋ ಫ್ರೀಕ್ವೆನ್ಸಿ ಸ್ಕ್ಯಾನರ್‌ ಕೂಡ ಬಳಸಲಾಗುವುದು. ಶೋಧ ಕಾರ್ಯಾಚರಣೆಯಲ್ಲಿ ಸಹಕರಿಸಲು ಎನ್ನೈಟಿಕೆ-ಸುರತ್ಕಲ್‌ನ ತಜ್ಞರ ನಾಲ್ಕು ತಂಡಗಳೂ ಆಗಮಿಸಿವೆ.

ಅರ್ಜುನ್‌ ಪತ್ತೆಹಚ್ಚುವಲ್ಲಿ ಯಾವುದೇ ವಿಳಂಬವುಂಟಾಗಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಭೂಕುಸಿತದಲ್ಲಿ ಮೃತಪಟ್ಟ ಎಂಟು ಮಂದಿಯ ಮೃತದೇಹಗಳು ಇಲ್ಲಿಯ ತನಕ ಪತ್ತೆಯಾಗಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 157