Gl harusha
ಕರಾವಳಿಸ್ಥಳೀಯ

ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ! ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ ಶೂಟೌಟ್ ಪ್ರಕರಣದ ಆರೋಪಿ! ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗಳು, ಮಾದಕ ವಸ್ತುಗಳ ವಶ!

ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

srk ladders
Pashupathi
Muliya

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು, ಮಾದಕ ವಸ್ತುಗಳಾದ ಎಂಡಿಎಂಎನ್ನು ಹೊಂದಿಕೊಂಡು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸಲು ಸಂಚು ರೂಫಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಫಳ್ನೀರ್ ಬಳಿಯಿಂದ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಮೊಹಮ್ಮದ್ ಹನೀಫ್ @ ಅಲಿ ಮುನ್ನಾ, ಮೊಹಮ್ಮದ್ ರಫೀಕ್ @ ಮುಡಿಪು ರಫೀಕ್ @ ರಫೀಕ್(36), ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ಗಳನ್ನು ವಶಪಡಿಸಿಕೊಂಡಿರುತ್ತಾರೆ.

ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 10 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳಿಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾಗಿದ್ದು, ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ @ ಅಲಿ ಮುನ್ನಾ ಎಂಬಾತನು ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜ್ಯಾರಿಯಲ್ಲಿರುತ್ತದೆ.

ಇನ್ನೋರ್ವ ಆರೋಪಿ ಮೊಹಮ್ಮದ್ ರಫೀಕ್ @ ಮುಡಿಪು ರಫೀಕ್ ಎಂಬಾತನ ವಿರುದ್ಧ ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ