ದೇಶಸ್ಥಳೀಯ

ಮಗಳಿಗಾಗಿ ತಂದೆಯ ಹುಡುಕಾಟ: ಕಣ್ಣೀರು ತರಿಸುವ ತಂದೆಯ ಹತಾಶ ಸ್ಥಿತಿ!! ವಯನಾಡ್ ಭೂಕುಸಿತ: 275 ಜೀವ ಬಲಿ, 240ಕ್ಕೂ ಅಧಿಕ ಮಂದಿ ನಾಪತ್ತೆ!

GL
ವಯನಾಡ್ ಭೂಕುಸಿತಗಳು ಸಂಭವಿಸಿದ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ನಡೆಯುತ್ತಿರುವ ಹುಡುಕಾಟ ಕರುಳು ಹಿಂಡುವಂತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರ : ವಯನಾಡ್ ಭೂಕುಸಿತಗಳು ಸಂಭವಿಸಿದ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ನಡೆಯುತ್ತಿರುವ ಹುಡುಕಾಟ ಕರುಳು ಹಿಂಡುವಂತಿದೆ.

maithri

ತನ್ನದೇ ಸ್ಥಿತಿಯಲ್ಲಿರುವ ಇತರ ಹಲವರೊಂದಿಗೆ ಹತಾಶ ತಂದೆಯೋರ್ವ ತನ್ನ ಮಗಳಿಗಾಗಿ ಹುಡುಕಾಡುತ್ತಿರುವ ಹೃದಯ ವಿದ್ರಾವಕ ದೃಶ್ಯಗಳನ್ನು ಟಿವಿ ಪರದೆಗಳು ತೋರಿಸಿವೆ.

ಮೃತಪಟ್ಟವರು, ಕೆಸರು ಮತ್ತು ಕಾಂಕ್ರೀಟ್ ಅವಶೇಷಗಳ ಕೆಳಗೆ ಹೂತುಹೋಗಿರುವವರಿಗಾಗಿ ಎಲ್ಲೆಡೆ ಹುಡುಕಾಡುತ್ತಿದ್ದಾರೆ. ಅಸಹನೀಯ ಮೌನದ ನಡುವೆ ರಕ್ಷಿಸಲ್ಪಟ್ಟವರ ಸಂಕಟ ಮತ್ತು ನಿಟ್ಟುಸಿರುಗಳು ಅಲ್ಲಲ್ಲಿ ಕೇಳಿ ಬರುತ್ತಿವೆ.

ಭೀಕರ ಸರಣಿ ಭೂಕುಸಿತಗಳಿಗೆ ಸಾಕ್ಷಿಯಾದ ಕೇರಳದ ವಯನಾಡಿನಲ್ಲಿ ಮೂರನೇ ದಿನವಾದ ಗುರುವಾರವೂ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ.

ಈ ನಡುವೆ ದುರಂತದಲ್ಲಿ ಮೃತರ ಸಂಖ್ಯೆ 275ನ್ನು ದಾಟಿದ್ದು, ಕನಿಷ್ಠ 240 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಈ ನಡುವೆ ಕೇರಳ ಕಂದಾಯ ಸಚಿವ ಕೆ.ರಾಜನ್ ಅವರು ಭೂಕುಸಿತದ ಬಳಿಕ ನಾಪತ್ತೆ ಆಗಿರುವವರ ನಿಖರ ಸಂಖ್ಯೆ ಇನ್ನೂ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

1 of 145