ಸ್ಥಳೀಯ

ರಸ್ತೆಗೆ ಅಂಟಿಕೊಂಡ ಮಣ್ಣ, ತೆರವು ಮಾಡೋ ಕಾರ್ಯ! ತೆಂಕಿಲ ಬೈಪಾಸ್ ರಸ್ತೆಯ ಸಂಚಾರಕ್ಕೆ ಮುಕ್ತ!

ಪುತ್ತೂರು: ಗುಡ್ಡ ಜರಿದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಕೊನೆ ಹಂತದ ಕಾರ್ಯಾಚರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗುಡ್ಡ ಜರಿದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಕೊನೆ ಹಂತದ ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರಕ್ಕೆ ತೆರೆದುಕೊಂಡಿದೆ.

chennai-shopping
Shani-pooja

ಈಗಾಗಲೇ ರಸ್ತೆಗೆ ಬಿದ್ದ ಮಣ್ಣನ್ನು ತೆರವು ಮಾಡಲಾಗಿದೆ. ಯಂತ್ರ ಬಳಸಿ ರಸ್ತೆಯಲ್ಲಿದ್ದ ಮಣ್ಣನ್ನು ತೆಗೆಯಲಾಯಿತು. ಮತ್ತೂ ಉಳಿದ ಮಣ್ಣನ್ನು ನೀರು ಹಾಯಿಸಿ ತೆಗೆಯುವ ಕಾರ್ಯ ಅಂತಿಮ ಹಂತದಲ್ಲದೆ. ಮಣ್ಣು ರಸ್ತೆಯಲ್ಲಿ ಹಾಗೇ ಉಳಿದರೆ, ಅಪಘಾತ ಸಂಭವಿಸುವ ಅಪಾಯವೇ ಹೆಚ್ಚು.

ಟ್ರಾಫಿಕ್ ಪೊಲೀಸರು ಬೈಪಾಸ್ ಪ್ರವೇಶಿಸುವ ಮಂಜಲ್ಪಡ್ಪು ಹಾಗೂ ದರ್ಬೆಯಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ. ಅಲ್ಲದೇ, ಗುಡ್ಡ ಕುಸಿದಿರುವ ತೆಂಕಿಲ ಬಳಿಯೂ ಬ್ಯಾರಿಕೇಡ್ ಹಾಕಿ, ಸಂಚಾರ ನಿಯಂತ್ರಿಸುತ್ತಿದ್ದಾರೆ. ಟ್ರಾಫಿಕ್ ಎಸ್ಸೈ ಉದಯರವಿ ಅವರು ಘಟನಾ ಸ್ಥಳದಲ್ಲಿ ಖುದ್ದು ಹಾಜರಿದ್ದು, ಅವಶ್ಯ ಕಾಮಗಾರಿಗಳಿಗೆ ನಿರ್ದೇಶನ ನೀಡುತ್ತಿದ್ದಾರೆ. ಈಗಾಗಲೇ ಸಹಾಯಕ ಆಯುಕ್ತರು ಸ್ಥಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಂಚಾರಕ್ಕೆ ಮುಕ್ತ

ಇನ್ನೇನು ಕೆಲವೇ ಗಂಟೆಯಲ್ಲಿ ಬೈಪಾಸ್ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ. ಆದರೆ ಗುಡ್ಡ ಜರಿಯುವ ಘಟನೆ ಮತ್ತೊಮ್ಮೆ ಸಂಭವಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ. ಆದ್ದರಿಂದ ರಸ್ತೆಯ ಒಂದು ಬದಿಯಿಂದ ಮಾತ್ರ ವಾಹನಗಳನ್ನು ಬಿಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122