Gl
ಕರಾವಳಿಸ್ಥಳೀಯ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ!

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

Pashupathi

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತರು. ಅಶೋಕ್ ಆ.4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಯುವಕನಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎಂಬಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ.

akshaya college

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಝಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113