tamanvi
ಕರಾವಳಿಸ್ಥಳೀಯ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ!

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತರು. ಅಶೋಕ್ ಆ.4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಯುವಕನಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎಂಬಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಝಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

1 of 184