tamanvi
ಕರಾವಳಿಸ್ಥಳೀಯ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ!

D_shiva_bhat
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

maithri

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತರು. ಅಶೋಕ್ ಆ.4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಯುವಕನಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎಂಬಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪ್ರಗತಿ ಅಂಬ್ಯುಲೆನ್ಸ್ ನ ಅಬ್ದುಲ್ ರಝಾಕ್ (ಅಚ್ಚು), ಚಿದಾನಂದ ಗೂನಡ್ಕ , ಶ್ರೀ ಮುತ್ತಪ್ಪನ್ ಅಂಬ್ಯುಲೆನ್ಸ್ ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 175