ಸ್ಥಳೀಯ

ರಾಷ್ಟ್ರಧ್ವಜಕ್ಕೆ ಅಪಮಾನ ಆಗದಂತೆ ಕ್ರಮ ಕೈಗೊಳ್ಳಲು ಆಗ್ರಹ | ರಾಜ್ಯಪಾಲರಿಗೆ ಮನವಿ ನೀಡಿದ ಹಿಂದೂ ಜನಜಾಗೃತಿ ಸಮಿತಿ

ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

akshaya college

ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಷರೀಫ್ ಮನವಿ ಸ್ವೀಕರಿಸಿದರು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವುದರ ವಿರುದ್ಧ, ಬೆಂಗಳೂರಿನ ರೈಲ್ವೆ ಸ್ಟೇಷನ್’ನಲ್ಲಿ ನಡೆದ ಅಕ್ರಮ ಮಾಂಸ ದಂಧೆಯ ವಿರುದ್ಧ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಸುಳ್ಳು ಕೇಸು ಹಾಕಿ ಬಂಧಿಸಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಲಾಯಿತು.

ಪ್ರಮುಖರಾದ ಬಾಲಚಂದ್ರ ಸೊರಕೆ, ಶ್ರೀಧರ, ವೇಣುಗೋಪಾಲ, ಅವಿನಾಶ ಪುರುಷರಕಟ್ಟೆ. ಜಯ ರಾಮ್ ರೈ, ಸಂತೋಷ್, ಗೀತೇಶ್ ರೈ, ಗೋಪಾಲ್ ವಿಟ್ಲ, ಕೃಷ್ಣ ಬೆಟ್ಟ , ಹಿಂದೂ ಜನಜಾಗೃತಿ ಸಮಿತಿಯ ಬಾಲಕೃಷ್ಣ ಶೆಟ್ಟಿ, ದೇಜಪ್ಪ ಗೌಡ ಬಂದಾರು, ಚಂದ್ರಶೇಖರ್ ಪಣಿತೋಟ, ಹರಿಪ್ರಸಾದ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107