ದೇಶಸ್ಥಳೀಯ

ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ: ಓರ್ವನ ಬಂಧನ!

ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

maithri

ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ನಿಗೂಢ ರೀತಿಯಲ್ಲಿ ಕಿರಿಯ ಮಹಿಳಾ ವೈದ್ಯರೊಬ್ಬರ ಅರೆ ನಗ್ನ ಶವ ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳು ಹಾಗೂ ತರಬೇತಿಯಲ್ಲಿದ್ದ ವೈದ್ಯರು ಸೇರಿ ವೈದ್ಯೆಯ ಹತ್ಯೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ ಆದರೆ ಆಡಳಿತ ಮಂಡಳಿ ಇದು ಆತ್ಮಹತ್ಯೆ ಎಂದು ಹೇಳಿತ್ತು, ಆದರೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಅಲಲ್ದೆ ಆಕೆಯ ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.

ಕಿರಿಯ ವೈದ್ಯೆ ಹತ್ಯೆ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ಸೇರಿದಂತೆ ಇತರ ಸಿಬಂದಿಗಳು ತಮ್ಮ ಸೇವೆಯನ್ನು ಮೊಟಕುಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅಲ್ಲದೆ ಆಸ್ಪತ್ರೆಗೆ ಯಾವುದೇ ಭದ್ರತೆ ಇಲ್ಲ ಯಾರು ಯಾವ ಸಮಯದಲ್ಲೂ ಆಸ್ಪತ್ರೆಗೆ ಭೇಟಿ ನೀಡಬಹುದು ಯಾವುದೇ ತಪಾಸಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…

1 of 146