Gl harusha
ಸ್ಥಳೀಯ

ಕಮಲಶಿಲೆ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.

srk ladders
Pashupathi
Muliya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಆಯೋಜಿಸಿದ್ದ ಕ್ಷೇತ್ರ ಸಂದರ್ಶನ ಕಾರ್ಯಕ್ರಮದ ನಿಮಿತ್ತ ಕಮಲಶಿಲೆ ಕ್ಷೇತ್ರದಲ್ಲಿ ಜರಗಿದ ಪ್ರತಿಷ್ಠಾನದ ಕೇಂದ್ರ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಷ್ಠಾನದ ಮೂರನೇ ವಾರ್ಷಿಕೋತ್ಸವ ಡಿಸೆಂಬರ್ ತಿಂಗಳಲ್ಲಿ ಜರಗಲಿದ್ದು ತಾಲೂಕು ಘಟಕಗಳ ಪದಾಧಿಕಾರಿಗಳು ಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿದರು.

ನೀಲಾವರದ ಗೋಶಾಲೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಮಂದರ್ತಿಕ್ಷೇತ್ರ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನವನ್ನು ತಂಡದಲ್ಲಿದ್ದ 33 ಹಿರಿಯ ಸದಸ್ಯರು ವೀಕ್ಷಿಸಿದರು.

ಕಮಲಶಿಲೆ ಕ್ಷೇತ್ರದಲ್ಲಿ ಭರತ್. ಕೆ ಮಂಗಳೂರು ಭಜನಾ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು. ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯ ಶಂಕರ ರೈ ಪುಣಚ, ಜಯರಾಮ ಪೂಜಾರಿ ನರಿಕೊಂಬು, ಚಂದ್ರಶೇಖರ ಆಳ್ವ ಪಡುಮಲೆ, ರಾಮಕೃಷ್ಣ ನಾಯಕ್ ಕೋಕಳ ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಪ್ರತಿಷ್ಠಾನದ ಉಪಾಧ್ಯಕ್ಷರಾದ ಜಯರಾಮ ಭಂಡಾರಿ ಎಂ. ಧರ್ಮಸ್ಥಳ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ