Gl
ಸ್ಥಳೀಯ

ಕಮಲಶಿಲೆ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.

rachana_rai
Pashupathi
akshaya college

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಆಯೋಜಿಸಿದ್ದ ಕ್ಷೇತ್ರ ಸಂದರ್ಶನ ಕಾರ್ಯಕ್ರಮದ ನಿಮಿತ್ತ ಕಮಲಶಿಲೆ ಕ್ಷೇತ್ರದಲ್ಲಿ ಜರಗಿದ ಪ್ರತಿಷ್ಠಾನದ ಕೇಂದ್ರ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

pashupathi

ಪ್ರತಿಷ್ಠಾನದ ಮೂರನೇ ವಾರ್ಷಿಕೋತ್ಸವ ಡಿಸೆಂಬರ್ ತಿಂಗಳಲ್ಲಿ ಜರಗಲಿದ್ದು ತಾಲೂಕು ಘಟಕಗಳ ಪದಾಧಿಕಾರಿಗಳು ಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿದರು.

ನೀಲಾವರದ ಗೋಶಾಲೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಮಂದರ್ತಿಕ್ಷೇತ್ರ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನವನ್ನು ತಂಡದಲ್ಲಿದ್ದ 33 ಹಿರಿಯ ಸದಸ್ಯರು ವೀಕ್ಷಿಸಿದರು.

ಕಮಲಶಿಲೆ ಕ್ಷೇತ್ರದಲ್ಲಿ ಭರತ್. ಕೆ ಮಂಗಳೂರು ಭಜನಾ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು. ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯ ಶಂಕರ ರೈ ಪುಣಚ, ಜಯರಾಮ ಪೂಜಾರಿ ನರಿಕೊಂಬು, ಚಂದ್ರಶೇಖರ ಆಳ್ವ ಪಡುಮಲೆ, ರಾಮಕೃಷ್ಣ ನಾಯಕ್ ಕೋಕಳ ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಪ್ರತಿಷ್ಠಾನದ ಉಪಾಧ್ಯಕ್ಷರಾದ ಜಯರಾಮ ಭಂಡಾರಿ ಎಂ. ಧರ್ಮಸ್ಥಳ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100