ದೇಶಸ್ಥಳೀಯ

ನೀರಜ್ ಚೋಪ್ರಾ – ಮನು ಭಾಕರ್ ವಿವಾಹ ಪ್ರಸ್ತಾಪ?? ಒಲಿಂಪಿಕ್ ಪದಕ ವಿಜೇತರ ಪೋಷಕರ ಮಾತು ಹೀಗಿದೆ…

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.

maithri

ಕೆಲವರು, ಮನು ಭಾಕರ್ ಅವರ ತಾಯಿಯು ನೀರಜ್ ಚೋಪ್ರಾರು ತಮ್ಮ ಪುತ್ರಿಗೆ ಸಮರ್ಪಕವಾಗಿ ಹೊಂದಾಣಿಕೆಯಾಗಬಹುದೇ ಎಂದು ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

ಈ ವೈರಲ್ ವಿಡಿಯೋಗಳ ಕುರಿತು ಪ್ರತಿಕ್ರಿಯಿಸಿರುವ ಮನು ಭಾಕರ್ ತಂದೆ ರಾಮ್ ಕಿಶನ್ ಭಾಕರ್, ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮನು ಭಾಕರ್ ಇನ್ನೂ ತೀರಾ ಕಿರಿಯಳಾಗಿದ್ದು, ಆಕೆಯ ವಿವಾಹದ ಕುರಿತು ನಮ್ಮ ಕುಟುಂಬ ಇದುವರೆಗೆ ಯಾವುದೇ ಯೋಚನೆ ಮಾಡಿಲ್ಲ. ಮನು ಭಾಕರ್ ಅವರ ವೃತ್ತಿ ಜೀವನ ಹಾಗೂ ವೈಯಕ್ತಿಕ ಬೆಳವಣಿಗೆಯ ಕುರಿತು ಮಾತ್ರ ನಮ್ಮ ಕುಟುಂಬವು ಗಮನ ಕೇಂದ್ರೀಕರಿಸಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನೀರಜ್ ಚೋಪ್ರಾರೊಂದಿಗೆ ತಮ್ಮ ಪತ್ನಿ ನಡೆಸಿರುವ ಮಾತುಕತೆ ಕುರಿತು ಪ್ರತಿಕ್ರಿಯಿಸಿರುವ ರಾಮ್ ಕಿಶನ್ ಭಾಕರ್, “ಮನುವಿನ ತಾಯಿಯು ನೀರಜ್ ಚೋಪ್ರಾರನ್ನು ತಮ್ಮ ಪುತ್ರನಂತೆ ಭಾವಿಸಿದ್ದಾರೆ. ನಮ್ಮ ನಡುವೆ ಕೌಟುಂಬಿಕ ಬಾಂಧವ್ಯವಿದ್ದು, ಇದರಲ್ಲಿ ಯಾವುದೇ ಪ್ರೇಮದ ಸಂಗತಿ ಒಳಗೊಂಡಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನೀರಜ್ ಚೋಪ್ರಾರ ಚಿಕ್ಕಪ್ಪ, “ನೀರಜ್ ಚೋಪ್ರಾ ಪದಕ ತಂದ ನಂತರ ಹೇಗೆ ಇಡೀ ದೇಶಕ್ಕೆ ಪರಿಚಿತರಾದರೋ, ಹಾಗೆಯೇ ಅವರು ವಿವಾಹವಾದ ನಂತರ ಆ ಸಂಗತಿ ಎಲ್ಲರಿಗೂ ತಿಳಿಯಲಿದೆ” ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…

1 of 146