tamanvi
ಕರಾವಳಿಸ್ಥಳೀಯ

ಧರ್ಮಸ್ಥಳದಲ್ಲಿ ವಾಹನಗಳನ್ನು ಚೆಂಡಾಡಿದ ಪುಂಡಾನೆ!! ಹೆದ್ದಾರಿಗಿಳಿದ ಆನೆಯಿಂದ ವಾಹನಗಳಿಗೆ ಹಾನಿ

D_shiva_bhat
ಧರ್ಮಸ್ಥಳ ಗ್ರಾಮದ ‌ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ವಾಹನಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ ಗ್ರಾಮದ ‌ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ವಾಹನಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

maithri

ಗುರುವಾರ ಬೆಳಗ್ಗೆ 7.40 ರ ಸುಮಾರಿಗೆ ಕಾಡಾನೆ ಬೊಳಿಯಾರು ಸಮೀಪ ಹೆದ್ದಾರಿಯಲ್ಲಿ ಕಾಣಿಸಿಕೊಂಡಿದೆ.

ರಸ್ತೆ ದಾಟುತ್ತಿದ್ದ ಕಾಡಾನೆ ರಸ್ತೆಯಲ್ಲಿಯೇ ನಿಂತಿತ್ತು. ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಬಂದ ಕೆಎಸ್ಸಾರ್ಟಿಸಿ ಬಸ್ಸನ್ನು ಅಡ್ಡಗಟ್ಟಿದ ಕಾಡಾನೆ ಬಸ್ಸಿನ ಮು‌ಂಭಾಗಕ್ಕೆ ತಿವಿದಿದ್ದು ಬಸ್ಸಿನ ಮುಂಭಾಗ ಜಖಂಗೊಂಡಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಇದೇ ವೇಳೆ ರಸ್ತೆಯಲ್ಲಿ ಬಂದ ದ್ವಿಚಕ್ರ ವಾಹನವನ್ನು ಬಿಟ್ಟು ಅದರ ಸವಾರ ಆನೆಯಿಂದ‌ ತಪ್ಪಿಸಿಕೊಂಡಿದ್ದು ವಾಹನವನ್ನು ಕಾಡಾನೆ ಹಾನಿಗೊಳಿಸಿದೆ.

ಬೊಳಿಯಾರು ಹಾಗೂ ಮುಳಿಕಾರು ಪರಿಸರದಲ್ಲಿ ಎರಡು ದಿನಗಳಿಂದ ಕಾಡಾನೆಗಳ ಹಿಂಡು ತಿರುಗಾಡುತ್ತಿದ್ದು ಕೃಷಿಕರಿಗೆ ತೊಂದರೆ ಉಂಟುಮಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 177