ಸ್ಥಳೀಯ

ರಸ್ತೆ ಬದಿ ಬೆಳೆದು ನಿಂತಿದ್ದ ಪೊದೆಗಳ ತೆರವುಗೊಳಿಸಿ, ಶ್ರಮದಾನ | ಸ್ವಾತಂತ್ರ್ಯೋತ್ಸವ ದಿನದಂದು ಸಂಪ್ಯ – ಒಳತ್ತಡ್ಕ ರಸ್ತೆಯಲ್ಲಿ ಶ್ರಮದಾನ

GL
ಸಂಪ್ಯ: ಸ್ವಾತಂತ್ರ್ಯೋತ್ಸವ ದಿನದಂದು ಶ್ರೀ ಕೃಷ್ಣ ಯುವಕ ಮಂಡಲ, ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನ, ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಸಂಪ್ಯದಿಂದ ವಳತ್ತಡ್ಕ ಸಂಪರ್ಕಿಸುವ ರಸ್ತೆಯ ಶುಚಿತ್ವ ಕಾರ್ಯ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಸಂಪ್ಯ: ಸ್ವಾತಂತ್ರ್ಯೋತ್ಸವ ದಿನದಂದು ಶ್ರೀ ಕೃಷ್ಣ ಯುವಕ ಮಂಡಲ, ಶ್ರೀ ಅಮ್ಮನವರ ಸೇವಾ ಸಮಿತಿ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ವತಿಯಿಂದ ಸಂಪ್ಯದಿಂದ ವಳತ್ತಡ್ಕ ಸಂಪರ್ಕಿಸುವ ರಸ್ತೆಯ ಶುಚಿತ್ವ ಕಾರ್ಯ ನಡೆಯಿತು.

chennai-shopping
maithri

ಇದೇ ಸಂದರ್ಭ ಕೊಲ್ಯ ಎಂಬಲ್ಲಿ ಮಳೆ ನೀರು ಹರಿದು ಅಪಾಯಕಾರಿ ಸ್ಥಿತಿಯಲ್ಲಿದ್ದ ರಸ್ತೆ ಬದಿಗೆ ಕೆಂಪು ಕಲ್ಲು ಹಾಸಲಾಯಿತು.

ರಸ್ತೆ ಬದಿ ಬೆಳೆದು ನಿಂತಿದ್ದ ಪೊದೆಗಳನ್ನು ಯಂತ್ರದ ಸಹಾಯದಿಂದ ತೆರವು ಮಾಡಲಾಯಿತು. ಕಸ-ಕಡ್ಡಿ, ತ್ಯಾಜ್ಯಗಳನ್ನು ತೆಗೆದು, ಸಂಚಾರಕ್ಕೆ ತೊಡಕಾಗದಂತೆ ಶುಚಿತ್ವ ಮಾಡಲಾಯಿತು.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪಿ.ಎಸ್.ಐ. ಜಂಬೂರಾಜ್ ಹಾಗೂ ರೋಟರಿ ಕ್ಲಬ್ ಸ್ವರ್ಣ ಅಧ್ಯಕ್ಷ ಸುರೇಶ್ ಪಿ. ಅವರು ಶುಚಿತ್ವ ಕಾರ್ಯಕ್ಕೆ ಚಾಲನೆ ನೀಡಿದರು.

ಶ್ರೀ ಕೃಷ್ಣ ಯುವಕ ಮಂಡಲದ ಅಧ್ಯಕ್ಷ ಸಂತೋಷ ಸುವರ್ಣ ಮೇರ್ಲ, ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಯ ಸಹಾಯಕ ನಿರೀಕ್ಷಕ ಶ್ರೀಧರ್, ಹೆಚ್.ಸಿ. ಪ್ರವೀಣ್ ರೈ, ಮತ್ತು ಠಾಣೆಯ ಸಿಬ್ಬಂದಿಗಳು ಲೋಕೇಶ್ ರೈ ಮೇರ್ಲ, ರಾಘವೇಂದ್ರ ರೈ ಮೇರ್ಲ, ಧನುಷ್ ಹೊಸಮನೆ, ಜಗನ್ನಾಥ ಪಿ, ಹರೀಶ ಪಿ, ಯೋಗೀಶ್ ಪಿ, ರಮೇಶ್ ಮೇಲಿನಕಾನ, ನವೀನ್ ನ್ಯಾಕ್ ಅಡ್ಡ, ಸೇಸಪ್ಪ ನ್ಯಾಕ್ ಅಡ್ಕ, ಧನುಷ್ ಪೆಲತ್ತಡಿ, ಕಂಬಳತ್ತಡ್ಡ ಅಂಗನವಾಡಿ ಶಿಕ್ಷಕಿ ಶ್ಯಾಮಲ, ಸಹಶಿಕ್ಷಕಿ ಪುಪ್ಪ, ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ರವೀಂದ್ರ ಶೆಟ್ಟಿ ಕಂಬಳತ್ತಡ್ಡ ಸಹಿತ ಹಲವಾರು ಉಪಸ್ಥಿತರಿದ್ದರು.

ಜಯಂತ ಶೆಟ್ಟಿ ಕಂಬಳತ್ತಡ್ಡ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122