ಸ್ಥಳೀಯ

ಸ.ಹಿ.ಪ್ರಾ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ | ಹಿರಿಯರ ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯದ ಹಿಂದಿದೆ: ಯಶೋಧ

ಸ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಸ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

maithri

ಶಾಲಾ ಎಸ್ .ಡಿ.ಎಂ.ಸಿ ಅಧ್ಯಕ್ಷೆ ಯಶೋಧ ರಾಷ್ಟ್ರ ಧ್ವಜಾರೋಹಣಗೈದು, ಹಿರಿಯರ ಪರಿಶ್ರಮ,ತ್ಯಾಗದ ಫಲವಾಗಿ ನಾವು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ ಎಂದರು.

ಬಳಿಕ ನಡೆದ ತಿರಂಗಾ ಯಾತ್ರೆಗೆ ಎಸ್‌.ಡಿ‌.ಎಂ.ಸಿ‌ ಉಪಾಧ್ಯಕ್ಷ ರಝಾಕ್ ಚಾಲನೆ ನೀಡಿ ಶುಭಹಾರೈಸಿದರು.

ತಿರಂಗಾ ಯಾತ್ರೆಯಲ್ಲಿ ಭಾರತ ಮಾತೆ, ಗಾಂಧೀಜಿ , ಒನಕೆ ಓಬವ್ವ , ಸುಭಾಶ್ಚಂದ್ರ ಭೋಸರ ವೇಷ ತೊಟ್ಟು ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದು ಆಕರ್ಷಕವಾಗಿತ್ತು.

ಬಳಿಕ ಎಸ್ .ಡಿ.ಎಂ.ಸಿ ಅಧ್ಯಕ್ಷೆ ಯಶೋಧರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆ ಗಳಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು.

ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಸ್ವಾಗತಿಸಿ, ಶಿಕ್ಷಕಿ‌ ಶಶಿಕಲಾ ವಂದಿಸಿದರು. ಶಿಕ್ಷಕ ಗಣೇಶ ನಾಯಕ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124