ಕರಾವಳಿಸ್ಥಳೀಯ

10.96 ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಿದ ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪ್. ಸೊಸೈಟಿ

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಮಂಗಳೂರಿನ ಶ್ರೀ ರಾಧಾಕೃಷ್ಣ ಸಭಾಂಗಣದಲ್ಲಿ ರವಿವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಮಂಗಳೂರಿನ ಶ್ರೀ ರಾಧಾಕೃಷ್ಣ ಸಭಾಂಗಣದಲ್ಲಿ ರವಿವಾರ ನಡೆಯಿತು.

akshaya college

ಸಂಸದ ಕ್ಯಾ । ಬ್ರಿಜೇಶ್ ಚೌಟ ಮಾತನಾಡಿ, ಭಾರತದ ಭವಿಷ್ಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಆಪರೇಟಿವ್ ಸೊಸೈಟಿ ಮಾಡುತ್ತಿದೆ. ದೇಶ ವಿಶ್ವಗುರುವಾಗುವ ಕಾಲಘಟ್ಟದಲ್ಲಿದ್ದು, ಅದಕ್ಕೆ ಪೂರಕ ತಯಾರಿಗಳನ್ನು ವಿದ್ಯಾರ್ಥಿ ಜೀವನದಲ್ಲೇ ಮಾಡಬೇಕು. ವಿಶ್ವಕ್ಕೆ ಮಾರ್ಗದರ್ಶಿಯಾಗಿ ಭಾರತವನ್ನು ಬೆಳೆಸುವ ಶಕ್ತಿ ವಿದ್ಯಾರ್ಥಿ ಸಮುದಾಯದಲ್ಲಿದೆ ಎಂದರು.

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪ್ ಸೊಸೈಟಿ ವಿದ್ಯಾರ್ಥಿ ವೇತನ ನೀಡುವ ಮೂಲಕ ದೇವರು ಮೆಚ್ಚುವ ಕೆಲಸ ಮಾಡುತ್ತಿದೆ. ಕಲಿಯುವ ವಿದ್ಯಾರ್ಥಿಗಳಿಗೆ ಸಹಕಾರ ನಿಜಾರ್ಥದ ಸೇವೆಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಪಿ ಉಪೇಂದ್ರ ಆಚಾರ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ನೀಡುವ ಪುರಸ್ಕಾರ ಮೌಲ್ಯ ಅಳೆಯದೆ, ನೀಡುವ ಮನಸ್ಸನ್ನು ತೂಗಬೇಕು. ಮಕ್ಕಳ ನೈಪುಣ್ಯವನ್ನು ಪೋಷಕರು ಕಂಡುಹಿಡಿದು ಪ್ರೋತ್ಸಾಹಿಸಬೇಕು ಎಂದರು.

ఎఐసి ನಿಟ್ಟೆ ಕ್ಯೂಬೇಷನ್ ಸೆಂಟ‌ರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಪಿ. ಆಚಾರ್, ದ.ಕ. ಎಸ್‌.ಪಿ ಯತೀಶ್ ಎನ್., ಮಂಗಳೂರಿನ ವಿಶ್ವ ಕರ್ಮ ಕಲಾ ಪರಿಷತ್ ಅಧ್ಯಕ್ಷ ಡಾ|ಎಸ್ .ಪಿ ಗುರುದಾಸ್, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ನಿರ್ದೇಶಕರಾದ ಕೆ. ಯಕ್ಷೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.

ಸೊಸೈಟಿಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು. ನಿರ್ದೇಶಕ ಕೆ. ಪ್ರಕಾಶ್ ಆಚಾರ್ಯ ವಂದಿಸಿದರು. ಉದಯ ಭಾಸ್ಕರ ಸುಳ್ಯ, ಉಷಾ ಮನೋಜ್ ನಿರೂಪಿಸಿದರು.

ದಾಖಲೆಯ ವಿದ್ಯಾರ್ಥಿವೇತನ ವಿತರಣೆ:

ಸೊಸೈಟಿಯ ವತಿಯಿಂದ ದಾಖಲೆ ಎಂಬಂತೆ 10.96 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. ಎಸೆಸೆಲ್ಸಿಯ 160, ಪಿಯುಸಿಯ 176 ವಿದ್ಯಾರ್ಥಿಗಳು ಸೇರಿ 336 ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡರು. ಅತ್ಯಧಿಕ ಅಂಕ ಗಳಿಸಿದ 6 ಮಂದಿ ವಿದ್ಯಾರ್ಥಿಗಳನ್ನು ಸಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

1 of 143