ಕರಾವಳಿಸ್ಥಳೀಯ

ಬಂಟ್ವಾಳ: ವಿದ್ಯಾರ್ಥಿ ಸುಮಂತ್ ಕೆರೆಗೆ ಹಾರಿ ಆತ್ಮಹತ್ಯೆ!

ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

maithri

ಕೋಕಲ ನಿವಾಸಿ ಸಾಯಿಶಾಂತಿ ಎಂಬವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಉಜಿರೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಈತ ಮಂಗಳವಾರ ಮುಂಜಾನೆ 5ರ ವೇಳೆಗೆ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈತನ ತಾಯಿ ಶಕುಂತಲಾ ಅವರು 2013ರಲ್ಲಿ ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಸಾವನ್ನಪ್ಪಿದ್ದರು.

ಸುಮಂತ್ ತನ್ನ ಸಾವಿಗೆ ಕಾರಣವನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 169