tamanvi
ಕರಾವಳಿಸ್ಥಳೀಯ

ಬಸ್ಸಿನಲ್ಲೇ ಅಸ್ವಸ್ಥಗೊಂಡ ವಿದ್ಯಾರ್ಥಿನಿ!! ಸಮಯಪ್ರಜ್ಞೆ ಮೆರೆದ ಚಾಲಕ, ನಿರ್ವಾಹಕರು!

D_shiva_bhat
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.
ಎಂದಿನಂತೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ ಎಸ್ (AKMS) ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿಯೋರ್ವಳು ಉಡುಪಿಗೆ ತೆರಳಲು ಹತ್ತಿದ್ದಾಳೆ ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಬಸ್ಸಿನ ಚಾಲಕ ನಸೀಫ್, ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ . ಪೈ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಬಳಿಕ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.
ವಿದ್ಯಾರ್ಥಿನಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ನೇರವಾದ ಎಕೆಎಂ ಎಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ…

1 of 181