Gl
ಕರಾವಳಿಸ್ಥಳೀಯ

ಪರಸ್ಪರ ಹೊಡೆದಾಡಿಕೊಂಡ ಬೀದಿಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು!!

ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಬಂದರು ಠಾಣೆಗೆ ದೂರು ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಬಂದರು ಠಾಣೆಗೆ ದೂರು ನೀಡಲಾಗಿದೆ.

Pashupathi

ದ.ಕ. ಜಿಲ್ಲಾ ಬೀದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತಿತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ ಮತ್ತು ಉಪಾಧ್ಯಕ್ಷ ರಹ್ಮಾನ್ ಅಡ್ಯಾರ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

akshaya college

ಈ ಮಧ್ಯೆ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ನವಾಝ್ ಕಣ್ಣೂರು, ಆನಂದ ಮತ್ತಿತರರ ವಿರುದ್ಧ ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್. ಬಂದರು ಠಾಣೆಗೆ ದೂರು ನೀಡಿದ್ದಾರೆ.

ಗುರುವಾರ ಸಂಜೆ ಸುಮಾರು 4ಕ್ಕೆ ಸಂಘದ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾಗ ಆರೋಪಿಗಳು ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ ಹಾಕಿ, ಹಲ್ಲೆ ನಡೆಸಲು ಮುಂದಾಗಿದ್ದಾರೆ. ಸಂಘದ ಬೋರ್ಡ್ ಮತ್ತು ಸಿಐಟಿಯು ಬಾವುಟವನ್ನು ಎಸೆದು ದಾಂಧಲೆ ನಡೆಸಿದ್ದಾರೆ ಎಂದು ಸಂತೋಷ್ ದೂರಿನಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113