ಸ್ಥಳೀಯ

ಸರ್ವೆ: ಕಿಟಕಿ ಮುರಿದು ನಗ-ನಗದು ಕಳವು!

D_shiva_bhat
ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

maithri

ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿ ಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ ಕಪಾಟಿನಿಂದ 3 ಪವನ್ ಚಿನ್ನ, 35 ಸಾವಿರ ರೂ. ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿರುವುದರಿಂದ ಮನೆ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125