Gl harusha
ಸ್ಥಳೀಯ

ರಿಕ್ಷಾ ಚಾಲಕ ಆತ್ಮಹತ್ಯೆ – ಸಬ್ ಇನ್ಸ್ ಪೆಕ್ಟರ್ ಅಮಾನತು!

ಆಟೋ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆಗೈದ  ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ನನ್ನು ಅಮಾನತುಗೊಳಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು: ಆಟೋ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆಗೈದ  ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ನನ್ನು ಅಮಾನತುಗೊಳಿಸಲಾಗಿದೆ.

srk ladders
Pashupathi
Muliya

ಕಾಸರಗೋಡು ನಗರ ಠಾಣಾ ಸಬ್‌ಇನ್ಸ್ ಪೆಕ್ಟರ್ ಆಗಿದ್ದ ಪಿ. ಅನೂಪ್‌ ಅವರನ್ನು ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಿನ್ನಲೆ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು.

ಸೋಮವಾರದಂದು ಅಬ್ದುಲ್ ಸತ್ತಾರ್ ರೈಲ್ವೆ ನಿಲ್ದಾಣ ಸಮೀಪದ ಕ್ವಾಟರ್ಸ್‌ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ನಗರದ ರಸ್ತೆ ಯೊಂದರಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರೆಂಬ ಕಾರಣಕ್ಕೆ ಅಬ್ದುಲ್ ಸತ್ತಾರ್ ರವರ ಆಟೋರಿಕ್ಷಾವನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಹಲವು ಬಾರಿ ಠಾಣೆಯ ಮೆಟ್ಟಲೇರಿದ್ದರೂ ಆಟೋ ರಿಕ್ಷಾ ಬಿಟ್ಟು ಕೊಡಲು ಮುಂದಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.

ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಬಾಲಕೃಷ್ಣನ್ ನಾಯರ್ ಗೆ ಆದೇಶ ನೀಡಲಾಗಿತ್ತು. ಇದರಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ .ಶಿಲ್ಪಾ ರವರಿಗೆ ವರದಿ ನೀಡಲಾಗಿತ್ತು. ಬಳಿಕ ಸಬ್‌ಇನ್ಸ್ ಪೆಕ್ಟರ್ ಅನೂಪ್‌ ಅವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಅನೂಪ್ ರವರನ್ನು ಅಮಾನತು ಗೊಳಿಸುವಂತೆ ಆಟೋ ಚಾಲಕರ ಸಂಘ, ಕೆಲ ರಾಜಕೀಯ ಪಕ್ಷಗಳು, ಸಂಘಟನೆಗಳು ಒತ್ತಾಯಿಸಿದ್ದವು. ಪ್ರತಿಭಟನೆಗೂ ಮುಂದಾಗಿದ್ದವು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ