tamanvi
ರಾಜ್ಯ ವಾರ್ತೆಸ್ಥಳೀಯ

ಲಾರಿ ಅಪಘಾತ..! ಯುವಕನ ಎದೆಯೊಳಗೆ ಕಬ್ಬಿಣದ ರಾಡ್!!

D_shiva_bhat
ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಪ್ರಯಾಣಿಸಿದ ಲಾರಿ ಮಗುಚಿ ಬಿದ್ದು ಸರ್ವಿಸ್ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಪ್ರಯಾಣಿಸಿದ ಲಾರಿ ಮಗುಚಿ ಬಿದ್ದು ಸರ್ವಿಸ್ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.

maithri

ರೋಗಿಯನ್ನು ಮೊದಲಿಗೆ ದಾವಣಗೆರೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಿಮ್ಸ್‌ಗೆ ತರಲಾಗಿತ್ತು.

ಜೀವನ್ಮರಣ ಸ್ಥಿತಿಯಲ್ಲಿದ್ದ ರೋಗಿಗೆ ಕಠಿಣ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಜೀವ ಉಳಿಸಿದ್ದಾರೆ. ಜೀವನ್ಮರಣ ಹೋರಾಟ ನಡೆಸಿದ ಯುವಕನ ಜೀವ ಉಳಿಸುವಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ವೈದ್ಯರು ಸಫಲರಾಗಿದ್ದಾರೆ.ಯುವಕನ ಜೀವ ಉಳಿಸಿದ ವೈದ್ಯರ ತಂಡಕ್ಕೆ ಸಚಿವ ಸಂತೋಷ್‌ ಲಾಡ್ ಅವರು ಹುಬ್ಬಳ್ಳಿಯಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು.

 ಸಮಾರಂಭದಲ್ಲಿ ಮಾತನಾಡಿದ ಸಂತೋಷ್ ಲಾಡ್, “ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಯುವಕನ ಜೀವ ಉಳಿಸಿದ ಎಲ್ಲ ವೈದ್ಯಕೀಯ ತಂಡವನ್ನು ಅಭಿನಂದಿಸುವೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಸವಾಲಾಗಿ ಸ್ವೀಕರಿಸಿದ ಎಲ್ಲ ವೈದ್ಯರಿಗೆ ಶುಭಾಶಯ” ಎಂದು ತಿಳಿಸಿದರು.

ಇದೇ ವೇಳೆ ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿ ಸಮರ್ಪಕವಾದ ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ  ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 160