Gl
ರಾಜ್ಯ ವಾರ್ತೆಸ್ಥಳೀಯ

ಲಾರಿ ಅಪಘಾತ..! ಯುವಕನ ಎದೆಯೊಳಗೆ ಕಬ್ಬಿಣದ ರಾಡ್!!

ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಪ್ರಯಾಣಿಸಿದ ಲಾರಿ ಮಗುಚಿ ಬಿದ್ದು ಸರ್ವಿಸ್ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಲಾರಿಯ ಚಾಲಕನ ಪಕ್ಕದ ಸೀಟಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಿರಸಿ ತಾಲೂಕಿನ ಜವಳಮಕ್ಕಿಯ 27 ವರ್ಷದ ದಯಾನಂದ ಎಂಬುವರು ಪ್ರಯಾಣಿಸಿದ ಲಾರಿ ಮಗುಚಿ ಬಿದ್ದು ಸರ್ವಿಸ್ ರಸ್ತೆಯಲ್ಲಿ ಅಳವಡಿಸಿದ್ದ ಚೂಪಾದ ದೊಡ್ಡ ಕಬ್ಬಿಣದ ರಾಡ್ ಎದೆ ಭಾಗಕ್ಕೆ ಚುಚ್ಚಿ ಬೆನ್ನಿನಿಂದ ಹೊರಬಂದಿತ್ತು.

rachana_rai
Pashupathi

ರೋಗಿಯನ್ನು ಮೊದಲಿಗೆ ದಾವಣಗೆರೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಿಮ್ಸ್‌ಗೆ ತರಲಾಗಿತ್ತು.

akshaya college

ಜೀವನ್ಮರಣ ಸ್ಥಿತಿಯಲ್ಲಿದ್ದ ರೋಗಿಗೆ ಕಠಿಣ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಜೀವ ಉಳಿಸಿದ್ದಾರೆ. ಜೀವನ್ಮರಣ ಹೋರಾಟ ನಡೆಸಿದ ಯುವಕನ ಜೀವ ಉಳಿಸುವಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ವೈದ್ಯರು ಸಫಲರಾಗಿದ್ದಾರೆ.ಯುವಕನ ಜೀವ ಉಳಿಸಿದ ವೈದ್ಯರ ತಂಡಕ್ಕೆ ಸಚಿವ ಸಂತೋಷ್‌ ಲಾಡ್ ಅವರು ಹುಬ್ಬಳ್ಳಿಯಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು.

 ಸಮಾರಂಭದಲ್ಲಿ ಮಾತನಾಡಿದ ಸಂತೋಷ್ ಲಾಡ್, “ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಯುವಕನ ಜೀವ ಉಳಿಸಿದ ಎಲ್ಲ ವೈದ್ಯಕೀಯ ತಂಡವನ್ನು ಅಭಿನಂದಿಸುವೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಸವಾಲಾಗಿ ಸ್ವೀಕರಿಸಿದ ಎಲ್ಲ ವೈದ್ಯರಿಗೆ ಶುಭಾಶಯ” ಎಂದು ತಿಳಿಸಿದರು.

ಇದೇ ವೇಳೆ ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿ ಸಮರ್ಪಕವಾದ ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ  ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 118