ಕರಾವಳಿರಾಜ್ಯ ವಾರ್ತೆಸ್ಥಳೀಯ

ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್..!

ರಸ್ತೆ  ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ರಸ್ತೆ  ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ.

ಬುಧವಾರದಂದು ಮುಂಜಾನೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನ‌ರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್‌ ಕಾನ್ಸೆಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ಸೆಬಲ್ ಮಸ್ಕಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…

1 of 184