ರಾಜ್ಯ ವಾರ್ತೆಸ್ಥಳೀಯ

ಡಾನಾ ಚಂಡಮಾರುತ! ಕರಾವಳಿ ಪ್ರದೇಶಕ್ಕೆ ಎಚ್ಚರಿಕೆ!!!

GL
ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.

chennai-shopping
maithri

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ.

ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋ‌ರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಭಾರತೀಯ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತನ್ನ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನಿಯೋಜಿಸಿದೆ.

ಸಮುದ್ರದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಿಮಾನಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

1 of 155