tamanvi
ಕರಾವಳಿಸ್ಥಳೀಯ

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ;  ಆರೋಪಿ ಪೊಲೀಸ್‌ ವಶ.!!

D_shiva_bhat
ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್   ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್   ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂದು ಗುರುತಿಸಲಾಗಿದೆ.

maithri

ಆರೋಪಿಯಿಂದ ಸುಮಾರು 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್‌ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾ‌ರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್‌ರಾಜ್ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174