ದೇಶರಾಜ್ಯ ವಾರ್ತೆಸ್ಥಳೀಯ

ಕೀಟನಾಶಕದಿಂದ ತೊಂದರೆ..! ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ತುಳಸಿ ನಿಷೇಧ!!

tv clinic
ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ ದಳಗಳನ್ನು ಸಮರ್ಪಿಸುವುದನ್ನು ನಿರ್ಬಂಧ ವಿಧಿಸಲಾಗಿದೆ. ಭಕ್ತಾದಿಗಳು ಸಮರ್ಪಿಸುತ್ತಿದ್ದ ತುಳಸಿಯಲ್ಲಿ ಅಧಿಕ ಮಟ್ಟದ ಕೀಟನಾಶಕ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆಯೆಂದು ದೇವಾಲಯದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ ದಳಗಳನ್ನು ಸಮರ್ಪಿಸುವುದನ್ನು ನಿಷೇಧಿಸಲಾಗಿದೆ.

core technologies

ಭಕ್ತಾದಿಗಳು ಸಮರ್ಪಿಸುತ್ತಿದ್ದ ತುಳಸಿಯಲ್ಲಿ ಅಧಿಕ ಮಟ್ಟದ ಕೀಟನಾಶಕ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆಯೆಂದು ದೇವಾಲಯದ ಮೂಲಗಳು ತಿಳಿಸಿವೆ.

akshaya college

ಭಕ್ತಾದಿಗಳು ಸಮರ್ಪಿಸುವ ತುಳಸಿಯ ದಳಗಳನ್ನು ನಿರ್ವಹಿಸುತ್ತಿದ್ದ ದೇವಾಲಯದ ಹಲವಾರು ಸಿಬ್ಬಂದಿಯಲ್ಲಿ ತುರಿಕೆ ಹಾಗೂ ಅಲರ್ಜಿಯಂತಹ ಸಮಸ್ಯೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

“ಬಹುತೇಕ ಯಾತ್ರಿಕರು ಅಂಗಡಿಗಳಿಂದ ತುಳಸಿಯನ್ನು ಖರೀದಿಸಿ ದೇವಾಲಯಕ್ಕೆ ಸಮರ್ಪಿಸುತ್ತಾರೆ. ವಾಣಿಜ್ಯ ಉದ್ದೇಶಕ್ಕಾಗಿ ಬೆಳಸಲಾಗುವ ಈ ತುಳಸಿಗಿಡದ ಎಲೆಗಳು ದೀರ್ಘ ಸಮಯದವರೆಗೆ ಬಾಡದಂತೆ ನೋಡಿಕೊಳ್ಳಲು ಅವುಗಳಿಗೆ ಅಧಿಕ ಪ್ರಮಾಣದಲ್ಲಿ ಕೀಟನಾಶಕಗಳನ್ನು ಸೇರಿಸಲಾಗುತ್ತದೆ. ಇಂತಹ ತುಳಸಿ ಎಲೆಗಳ ನಿರಂತರ ಸಂಪರ್ಕದಿಂದಾಗಿ ದೇವಾಲಯದ ಸಿಬ್ಬಂದಿಯಲ್ಲಿ ಅಲರ್ಜಿ ಹಾಗೂ ತುರಿಕೆಯ ಸಮಸ್ಯೆಗಳು ಕಾಣಿಸಿಕೊಂಡಿವೆ “ಎಂದು ದೇವಾಲಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಪೂಜಾ ಉದ್ದೇಶಗಳಿಗೆ ಕೀಟನಾಶಕ ಮುಕ್ತ ತುಳಸಿಯನ್ನು ಪಡೆಯಲು ದೇವಾಲಯವು ವಿಶೇಷ ವ್ಯವಸ್ಥೆಯನ್ನು ಮಾಡಿದೆಯೆಂದು ದೇವಾಲಯ ಸಿಬ್ಬಂದಿ ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 163