ಕರಾವಳಿಸ್ಥಳೀಯ

ಕಾಂಗ್ರೆಸ್ ಮುಖಂಡನ  ಪುತ್ರ ಹೃದಯಾಘಾತಕ್ಕೊಳಗಾಗಿ ನಿಧನ

GL
ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾಗಿ ಗುರುವಾರ ನಿಧನ ಹೊಂದಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್: ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾಗಿ ಗುರುವಾರ ನಿಧನ ಹೊಂದಿದರು.

chennai-shopping
maithri

ಗುರುವಾರ ಮನೆಯಲ್ಲಿದ್ದ ವೇಳೆ ಎದೆನೋವು, ಕೈಕಾಲು ನೋವು, ಬೆನ್ನು ನೋವು ಎಂದು ತಿಳಿಸಿದ್ದರು. ಬಳಿಕ ಎದೆನೋವು ಹೆಚ್ಚಾದ ಪರಿಣಾಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮಂಗಳೂರು ಬಾವ ಅವರ 4 ಗಂಡು ಮತ್ತು 2 ಹೆಣ್ಣು ಮಕ್ಕಳ ಪೈಕಿ ಮುಹಮ್ಮದ್ ಆಸಿಫ್ ಕೊನೆಯವರಾಗಿದ್ದರು. ಅವರು ತಂದೆ, ತಾಯಿ, ಮೂವರು ಸಹೋದರರು ಮತ್ತು ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯ ಕೃಷ್ಣಾಪುರ 7ನೇ ಬ್ಲಾಕ್ ನ ಈದ್ಧಾ ಖಬಸ್ತಾನದಲ್ಲಿ ನಡೆಯಿತು.

ಸಂತಾಪ: ಕಾಂಗ್ರೆಸ್ ಮುಖಂಡ ಮಂಗಳೂರು ಬಾವ ಅವರ

ಪುತ್ರ ಮುಹಮ್ಮದ್ ಆಸಿಫ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಪ್ರಧಾನ ಕಾರ್ಯದರ್ಶಿಗಳಾದ ರೆಹಮಾನ್ ಖಾನ್ ಕುಂಜತ್ತಬೈಲ್, ರಾಜೇಶ್ ಕುಳಾಯಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 163