tamanvi
ಕರಾವಳಿಸ್ಥಳೀಯ

ಕಾಂಗ್ರೆಸ್ ಮುಖಂಡನ  ಪುತ್ರ ಹೃದಯಾಘಾತಕ್ಕೊಳಗಾಗಿ ನಿಧನ

D_shiva_bhat
ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾಗಿ ಗುರುವಾರ ನಿಧನ ಹೊಂದಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್: ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾಗಿ ಗುರುವಾರ ನಿಧನ ಹೊಂದಿದರು.

maithri

ಗುರುವಾರ ಮನೆಯಲ್ಲಿದ್ದ ವೇಳೆ ಎದೆನೋವು, ಕೈಕಾಲು ನೋವು, ಬೆನ್ನು ನೋವು ಎಂದು ತಿಳಿಸಿದ್ದರು. ಬಳಿಕ ಎದೆನೋವು ಹೆಚ್ಚಾದ ಪರಿಣಾಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮಂಗಳೂರು ಬಾವ ಅವರ 4 ಗಂಡು ಮತ್ತು 2 ಹೆಣ್ಣು ಮಕ್ಕಳ ಪೈಕಿ ಮುಹಮ್ಮದ್ ಆಸಿಫ್ ಕೊನೆಯವರಾಗಿದ್ದರು. ಅವರು ತಂದೆ, ತಾಯಿ, ಮೂವರು ಸಹೋದರರು ಮತ್ತು ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯ ಕೃಷ್ಣಾಪುರ 7ನೇ ಬ್ಲಾಕ್ ನ ಈದ್ಧಾ ಖಬಸ್ತಾನದಲ್ಲಿ ನಡೆಯಿತು.

ಸಂತಾಪ: ಕಾಂಗ್ರೆಸ್ ಮುಖಂಡ ಮಂಗಳೂರು ಬಾವ ಅವರ

ಪುತ್ರ ಮುಹಮ್ಮದ್ ಆಸಿಫ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಪ್ರಧಾನ ಕಾರ್ಯದರ್ಶಿಗಳಾದ ರೆಹಮಾನ್ ಖಾನ್ ಕುಂಜತ್ತಬೈಲ್, ರಾಜೇಶ್ ಕುಳಾಯಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174