Gl
ಕರಾವಳಿಸ್ಥಳೀಯ

ಪುತ್ತೂರಿನಲ್ಲಿ ನಾಳೆ ‘ಅಶೋಕ ಜನ ಮನ’: ಪುತ್ತೂರು ಸಿಟಿ ಸಂಚಾರ ಮಾರ್ಗ ಬದಲಾವಣೆ!!

ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

rachana_rai
Pashupathi
akshaya college
Balakrishna-gowda

ಜನ ಸೇರುವ ನಿರೀಕ್ಷೆ ಇದ್ದು. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ನ.2ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿಸಲು ಪುತ್ತೂರು ಉಪವಿಭಾಗಾಧಿಕಾರಿಗಳು ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿಸಿ ಪ್ರಸ್ತಾವನೆಯನ್ನು ಸಲ್ಲಿಸಿರುವ ಮೇರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

pashupathi

ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಾವಳಿ 1989ರ ನಿಯಮ 221(ಎ)(5) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಪುತ್ತೂರು ಪೇಟೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಯೂರ ಜಂಕ್ಷನ್‌ನಿಂದ ಕೊಂಬೆಟ್ಟು ಮಾರ್ಗವಾಗಿ ಬೊಳುವಾರು ಕಡೆಗೆ ಹಾದು ಹೋಗುವ ರಸ್ತೆಯನ್ನು ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ದಿನಾಂಕ: 02.11.2024 0.ಬೆಳಿಗ್ಗೆ 07:00 ಯಿಂದ ಸಂಜೆ  06.00 ಗಂಟೆಯವರೆಗೆ ಮಯೂರ ಜಂಕ್ಷನ್ ನಿಂದ ಬೊಳುವಾರು ಆಂಜನೇಯ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆಯನ್ನು ಮುಖ್ಯ ರಸ್ತೆಯಿಂದ ದೇವಸ್ಥಾನದ ಕಡೆಗೆ ಸಂಚರಿಸಲು ಏಕಮುಖ ರಸ್ತೆಯನ್ನಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124