tamanvi
ಕರಾವಳಿಸ್ಥಳೀಯ

ಬೈಕ್‌ ಅಪಘಾತ: ಸವಾರ ಗಂಭೀರ!!

D_shiva_bhat
ಚಂದಳಿಕೆಯಲ್ಲಿ ಪಾದಚಾರಿಯೊಬ್ಬರ ಜೀವ ರಕ್ಷಣೆ ಮಾಡಲು ಹೋದ ಬೈಕ್‌ ಸವಾರ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಪ್ಪಳಿಸಿ ಗಂಬೀರ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಕಬಕ – ವಿಟ್ಲ ರಸ್ತೆಯ ಚಂದಳಿಕೆಯಲ್ಲಿ ಪಾದಚಾರಿಯೊಬ್ಬರ ಜೀವ ರಕ್ಷಣೆ ಮಾಡಲು ಹೋದ ಬೈಕ್‌ ಸವಾರ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಪ್ಪಳಿಸಿ ಗಂಬೀರ ಗಾಯಗೊಂಡಿದ್ದಾರೆ.

maithri

ಅರ್ಕೆಜಾರು ನಿವಾಸಿ ನಾಗೇಶ್ ಗೌಡ (35) ಗಾಯಗೊಂಡವರು. ಪಾದಾಚಾರಿ ಮಹಿಳೆಗೂ ತಲೆಗೆ ಗಾಯವಾಗಿದೆ. ವಿಟ್ಲ ಪೇಟೆಯಿಂದ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ರಿಕ್ಷಾದಿಂದ ಇಳಿದ ಮಹಿಳೆಯೊಬ್ಬರು ಏಕಾ ಏಕಿ ರಸ್ತೆಯನ್ನು ದಾಟಲು ಮುಂದಾಗಿದ್ದಾರೆ. ಬೈಕ್ ಸವಾರ ಇವರನ್ನು ತಪ್ಪಿಸಲು ಮುಂದಾದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ರಸ್ತೆಯಲ್ಲಿ ಬಿದ್ದಿದ್ದವರನ್ನು ಸ್ಥಳೀಯರು ರಿಕ್ಷಾ ಮೂಲಕ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳಕ್ಕೆ 112 ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174