Gl jewellers
ಸ್ಥಳೀಯ

ಸಂತ ಫಿಲೋಮಿನಾ ಕಾಲೇಜ್: ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮವನ್ನು  ಮಂಗಳವಾರದಂದು ಕಾಲೇಜಿನ ಸಿಲ್ವರ್ ಜುಬ್ಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮವನ್ನು  ಮಂಗಳವಾರದಂದು ಕಾಲೇಜಿನ ಸಿಲ್ವರ್ ಜುಬ್ಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು

Papemajalu garady
Karnapady garady

ಮುಖ್ಯ ಅತಿಥಿ ರೋ, ಡಾ ಶ್ರೀಪತಿ ರಾವ್  ಅಧ್ಯಕ್ಷ ರೋಟರಿ ಕ್ಲಬ್ ಪುತ್ತೂರು ತಮ್ಮ ಅತಿಥಿ ಉಪನ್ಯಾಸದಲ್ಲಿ ವಿದ್ಯಾರ್ಥಿಗಳಿಗೆ ಈ ರೋಗದ ಬಗ್ಗೆ ಜಾಗೃತರಾಗಬೇಕು ಎಂದು ತಿಳುವಳಿಕೆ ಸಂದೇಶ ನೀಡಿದರು ಮತ್ತು ಸಮಯಕ್ಕೆ ಸರಿಯಾಗಿ ವೈದ್ಯರಿಂದ ಸಲಹೆ ಪಡೆಯಬೇಕು ಎಂದು ತಿಳಿಸಿದರು

ಸಂಪನ್ಮೂಲ ವ್ಯಕ್ತಿ ಡಾ. ಸ್ಮಿತಾ ರಾವ್, ಬ್ರೆಸ್ಟ್ & ಎಂಡೋಕ್ರೀನ ಸರ್ಜನ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಆಂಕೊಲಾಜಿ, ಕೆ.ಎಸ್‌.ಹೆಗ್ಡೆ ಮೆಡಿಕಲ್ ಅಕಾಡೆಮಿ ಅವರು ಸ್ತನ ಕ್ಯಾನ್ಸರ್ ಮತ್ತು ಅದರ ಅಪಾಯದ ಅಂಶಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ವಿವರಿಸಿದರು, ಸ್ತನ ಕ್ಯಾನ್ಸರ್ ಆರಂಭಿಕ ಪತ್ತೆಹಚ್ಚುವಿಕೆ ಇಂದ ವ್ಯಕ್ತಿ ಬದುಕಬಲ್ಲ ಎಂದು ತಿಳಿಸಿದರು

ಎಸ್‌ಡಿಎಂ ಆಸ್ಪತ್ರೆ ಉಜಿರೆಯ ಸಹಾಯಕ ಪ್ರಾಧ್ಯಾಪಕಿ ಡಾ ಅನನ್ಯಲಕ್ಷ್ಮಿ ಅವರು ಸ್ತನ ಕ್ಯಾನ್ಸರ್ ಮತ್ತು ಅದರ ಅಪಾಯಕಾರಿ ಅಂಶಗಳ ಬಗ್ಗೆ ಪ್ರಮುಖ ಟಿಪ್ಪಣಿಗಳೊಂದಿಗೆ ಪರಿಕಲ್ಪನೆಯನ್ನು ನೀಡಿದರು

ಈ ಜಾಗೃತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ.ಅಂಟೋನಿ ಪ್ರಕಾಶ್ ಮೊಂತೇರೋ ವಿದ್ಯಾರ್ಥಿಗಳು ಈ ಮಾಹಿತಿಯನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಿ ಬದುಕಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಆಂಟಿ ವಿಮೆನ್ ಹೆರಸ್ಕೆಂಟ್ ಸೆಲ್ ಸಂಯೋಜಕಿ ನೊವೆಲಿನ್ ಎನ್ ಫರ್ನಾಡಸ್ ಮತ್ತು, ವಿಮೆನ್ ಎಂಪವ‌ರ್ ಮೆಂಟ್ ಸೆಲ್ ಸಂಯೋಜಕಿ ಪ್ರೇಮಲತಾ ಉಪಸ್ಥಿತರಿದ್ದರು, ಬಿಬಿಎ ವಿದ್ಯಾರ್ಥಿನಿ ಅಚ್ಚಮ್ಮ ಸ್ವಾಗತಿಸಿದರು. ಅಖಿಲಾ ಮತ್ತು ತಂಡ ಪ್ರಾರ್ಥನೆಯನ್ನು ನೆರವೇರಿಸಿದರು. ಸಿಮ್ರಾನ್ ತಾಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು, ಟಿನ್ಸಿ ಥಾಮಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಿಯಾ,  ವಂದಿಸಿದರು, ರೋಟರಿ ಕ್ಲಬ್ ಸದಸ್ಯರು, ಮತ್ತು ಆಂಟಿ ವಿಮೆನ್ ಹೆರಸೈಂಟ್ ಸೆಲ್ ಸದಸ್ಯರು, ವಿಮೆನ್ ಎಂಪವರ್ ಮೆಂಟ್ ಸೆಲ್ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು

 


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ